ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದರು.
ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲು ವಿದ್ಯುತ್ ಮಾರ್ಗ ನಿರ್ಮಿಸುವ ವೇಳೆಯಲ್ಲಿ ಅರಣ್ಯ ಇಲಾಖೆಯಿಂದ ಮಾರ್ಗವನ್ನು ನಿರ್ಮಿಸಲು ಅನುಮತಿ ನೀಡದೆ ಇದ್ದರಿಂದ ಸದರಿ ಗ್ರಾಮಗಳಿಗೆ ಮೇ ಪಾವನಿ ಕಂಟ್ರೋಲ್ & ಪ್ಯಾನೆಲ್ ಆಂಧ್ರಪ್ರದೇಶದ Aerial Bunched cable ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಮುಂದುವರೆದು ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 79.04 ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ ಹೂಗ್ಯಂ ಗ್ರಾಮ ಪಂಚಾಯಿತಿಯ 6ಹಳ್ಳಿಗಳ ವ್ಯಾಪ್ತಿಯ 30ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ 12 ಕಿಲೋ ಮೀಟರ್ ವಿದ್ಯುತ್ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುತ್ತವೆ ಹಾಗೂ ಸುಮಾರು 5 ವರ್ಷದ ಹಿಂದೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ಕೇಬಲ್ಗಳು ಪಂಚರಾಗಿ pot Head ಗಳು ವಿಫಲಗೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುತ್ತದೆ .ದುರಸ್ತಿ ಸಂದರ್ಭದಲ್ಲಿ ಹಾಲಿ ಇರುವ ಜಲ್ಲಿಪಾಳ್ಯ ಗ್ರಾಮಾಂತರ ಮಾರ್ಗದಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಸದರಿ ಎಬಿ ಕೇಬಲ್ ಗಳನ್ನು covered conductor ಯಿಂದ ಬದಲಾಯಿಸಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ಬಳಿಕ ಸದರಿ ಕೇಬಲ್ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ರೈತರಿಗೆ ಪ್ರಸ್ತುತ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದನ್ವಯ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7ಗಂಟೆ 3ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…