ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದರು.
ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲು ವಿದ್ಯುತ್ ಮಾರ್ಗ ನಿರ್ಮಿಸುವ ವೇಳೆಯಲ್ಲಿ ಅರಣ್ಯ ಇಲಾಖೆಯಿಂದ ಮಾರ್ಗವನ್ನು ನಿರ್ಮಿಸಲು ಅನುಮತಿ ನೀಡದೆ ಇದ್ದರಿಂದ ಸದರಿ ಗ್ರಾಮಗಳಿಗೆ ಮೇ ಪಾವನಿ ಕಂಟ್ರೋಲ್ & ಪ್ಯಾನೆಲ್ ಆಂಧ್ರಪ್ರದೇಶದ Aerial Bunched cable ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಮುಂದುವರೆದು ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 79.04 ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ ಹೂಗ್ಯಂ ಗ್ರಾಮ ಪಂಚಾಯಿತಿಯ 6ಹಳ್ಳಿಗಳ ವ್ಯಾಪ್ತಿಯ 30ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ 12 ಕಿಲೋ ಮೀಟರ್ ವಿದ್ಯುತ್ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುತ್ತವೆ ಹಾಗೂ ಸುಮಾರು 5 ವರ್ಷದ ಹಿಂದೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ಕೇಬಲ್ಗಳು ಪಂಚರಾಗಿ pot Head ಗಳು ವಿಫಲಗೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುತ್ತದೆ .ದುರಸ್ತಿ ಸಂದರ್ಭದಲ್ಲಿ ಹಾಲಿ ಇರುವ ಜಲ್ಲಿಪಾಳ್ಯ ಗ್ರಾಮಾಂತರ ಮಾರ್ಗದಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಸದರಿ ಎಬಿ ಕೇಬಲ್ ಗಳನ್ನು covered conductor ಯಿಂದ ಬದಲಾಯಿಸಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ಬಳಿಕ ಸದರಿ ಕೇಬಲ್ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ರೈತರಿಗೆ ಪ್ರಸ್ತುತ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದನ್ವಯ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7ಗಂಟೆ 3ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…