ಜಿಲ್ಲೆಗಳು

ಹೂಗ್ಯಂ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ನಿರಂತರ ಯೋಜನೆಯಡಿ ವಿದ್ಯುತ್ ಪೂರೈಕೆ : ಸಚಿವ ಸುನಿಲ್ ಕುಮಾರ್

ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು  ಸಚಿವ ಸುನೀಲ್ ಕುಮಾರ್ ತಿಳಿಸಿದರು.

ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲು ವಿದ್ಯುತ್ ಮಾರ್ಗ ನಿರ್ಮಿಸುವ ವೇಳೆಯಲ್ಲಿ ಅರಣ್ಯ ಇಲಾಖೆಯಿಂದ ಮಾರ್ಗವನ್ನು ನಿರ್ಮಿಸಲು ಅನುಮತಿ ನೀಡದೆ ಇದ್ದರಿಂದ ಸದರಿ ಗ್ರಾಮಗಳಿಗೆ ಮೇ ಪಾವನಿ ಕಂಟ್ರೋಲ್ & ಪ್ಯಾನೆಲ್ ಆಂಧ್ರಪ್ರದೇಶದ Aerial Bunched cable ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಮುಂದುವರೆದು ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 79.04 ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ ಹೂಗ್ಯಂ ಗ್ರಾಮ ಪಂಚಾಯಿತಿಯ 6ಹಳ್ಳಿಗಳ ವ್ಯಾಪ್ತಿಯ 30ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ 12 ಕಿಲೋ ಮೀಟರ್ ವಿದ್ಯುತ್ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುತ್ತವೆ ಹಾಗೂ ಸುಮಾರು 5 ವರ್ಷದ ಹಿಂದೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ಕೇಬಲ್‌ಗಳು ಪಂಚರಾಗಿ pot Head ಗಳು ವಿಫಲಗೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುತ್ತದೆ .ದುರಸ್ತಿ ಸಂದರ್ಭದಲ್ಲಿ ಹಾಲಿ ಇರುವ ಜಲ್ಲಿಪಾಳ್ಯ ಗ್ರಾಮಾಂತರ ಮಾರ್ಗದಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಸದರಿ ಎಬಿ ಕೇಬಲ್ ಗಳನ್ನು covered conductor ಯಿಂದ ಬದಲಾಯಿಸಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ಬಳಿಕ ಸದರಿ ಕೇಬಲ್ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ರೈತರಿಗೆ ಪ್ರಸ್ತುತ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದನ್ವಯ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7ಗಂಟೆ 3ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

7 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago