ಜಿಲ್ಲೆಗಳು

ಹೂಗ್ಯಂ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ನಿರಂತರ ಯೋಜನೆಯಡಿ ವಿದ್ಯುತ್ ಪೂರೈಕೆ : ಸಚಿವ ಸುನಿಲ್ ಕುಮಾರ್

ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು  ಸಚಿವ ಸುನೀಲ್ ಕುಮಾರ್ ತಿಳಿಸಿದರು.

ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲು ವಿದ್ಯುತ್ ಮಾರ್ಗ ನಿರ್ಮಿಸುವ ವೇಳೆಯಲ್ಲಿ ಅರಣ್ಯ ಇಲಾಖೆಯಿಂದ ಮಾರ್ಗವನ್ನು ನಿರ್ಮಿಸಲು ಅನುಮತಿ ನೀಡದೆ ಇದ್ದರಿಂದ ಸದರಿ ಗ್ರಾಮಗಳಿಗೆ ಮೇ ಪಾವನಿ ಕಂಟ್ರೋಲ್ & ಪ್ಯಾನೆಲ್ ಆಂಧ್ರಪ್ರದೇಶದ Aerial Bunched cable ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಮುಂದುವರೆದು ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 79.04 ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ ಹೂಗ್ಯಂ ಗ್ರಾಮ ಪಂಚಾಯಿತಿಯ 6ಹಳ್ಳಿಗಳ ವ್ಯಾಪ್ತಿಯ 30ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ 12 ಕಿಲೋ ಮೀಟರ್ ವಿದ್ಯುತ್ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುತ್ತವೆ ಹಾಗೂ ಸುಮಾರು 5 ವರ್ಷದ ಹಿಂದೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ಕೇಬಲ್‌ಗಳು ಪಂಚರಾಗಿ pot Head ಗಳು ವಿಫಲಗೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುತ್ತದೆ .ದುರಸ್ತಿ ಸಂದರ್ಭದಲ್ಲಿ ಹಾಲಿ ಇರುವ ಜಲ್ಲಿಪಾಳ್ಯ ಗ್ರಾಮಾಂತರ ಮಾರ್ಗದಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಸದರಿ ಎಬಿ ಕೇಬಲ್ ಗಳನ್ನು covered conductor ಯಿಂದ ಬದಲಾಯಿಸಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ಬಳಿಕ ಸದರಿ ಕೇಬಲ್ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ರೈತರಿಗೆ ಪ್ರಸ್ತುತ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದನ್ವಯ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7ಗಂಟೆ 3ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

15 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago