ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಠಾಣಾ ವ್ಯಾಪ್ತಿಯ ಬೀರುಗ ಗ್ರಾಮದ ಆತ್ಮಹಿತ ಹೋಮ್ ಸ್ಟೇಯಲ್ಲಿ ಕಳವು ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೀರುಗ ಗ್ರಾಮದ ನಾಯಿಕಲ್ ನಿವಾಸಿಗಳಾದ ಮಂಜು, ಸಂಜು ಹಾಗೂ ಸುಧೀರ್ ಬಂಧಿತ ಆರೋಪಿಗಳು.
ತೆಲಂಗಾಣ ರಾಜ್ಯದ ಸಿಖೆಂದ್ರಬಾದ್ ವಾಸಿ ಡಾ.ರವೀಂದ್ರ ಕೊಟ್ಟಿರಿ ಅವರ ಮಾಲೀಕತ್ವದ ಹೋಮ್ ಸ್ಟೆಯನ್ನು ಸ್ಥಳೀಯರಾದ ಸುನಿಲ್ ನಿರ್ವಹಿಸುತ್ತಿದ್ದರು. ಕಳೆದ ಜೂ.೨೯ರಂದು ಹೋಂಸ್ಟೆಯಲ್ಲಿ ಕಳವು ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು, ವಿಚಾರಣೆ ನಡೆಸಿದಾಗ ಹೋಂಸ್ಟೆಯಲ್ಲಿದ್ದ ಫ್ರಿಡ್ಜ್, ಸಿಲಿಂಡರ್, ಕುಕ್ಕರ್, ಬ್ಲಾಂಕೇಟ್, ಬೆಡ್ ಶೀಟ್ ಮುಂತಾದ ಸಾಮಗ್ರಿಗಳನ್ನು ಕಳವು ಮಾಡಿ ಆರೋಪಿಗಳು ಅರಣ್ಯದೊಳಗೆ ಬಚ್ಚಿಟ್ಟಿದ್ದನ್ನು ಒಪ್ಪಿಕೊಂಡರು. ಜೊತೆಗೆ ಕೆಲವು ಸಾಮಗ್ರಿಗಳನ್ನು ಮನೆಯಲ್ಲಿ ಇಟ್ಟಿರುವ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಕಳವು ಮಾಡಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ.ಎ.ಅಯ್ಯಪ್ಪ ಹಾಗೂ ಪೊಲೀಸ್ ಉಪಾಧಿಕ್ಷಕ ನಿರಂಜನ್ ರಾಜೆ ಅರಸ್ ಆವರ ಮಾರ್ಗದರ್ಶನದಂತೆ ಕುಟ್ಟ ವೃತ್ತ ನಿರೀಕ್ಷಕ ಮಂಜಪ್ಪ ಅವರ ನಿರ್ದೇಶನದಂತೆ ಶ್ರೀಮಂಗಲ ಠಾಣಾಧಿಕಾರಿ ರವಿಶಂಕರ್ ಹಾಗೂ ಎ.ಎಸ್.ಐ. ಬೋಪಯ್ಯ, ಸಿಬ್ಬಂದಿಗಳಾದ ಎಂ.ಕೆ. ಖಾಲಿದ್, ಶಿವಪ್ಪ ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…