Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಹೊಂಗನೂರು ಗ್ರಾ.ಪಂ ಅಧ್ಯಕ್ಷರ ಪದಚ್ಯುತಿ :  ಅವಿಶ್ವಾಸ ನಿರ್ಣಯಕ್ಕೆ ಗೆಲುವು

ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು.
ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ ಅತೃಪ್ತಿಕರ ಆಡಳಿತದಿಂದ ಬೇಸತ್ತು ಅವರ ವಿರುದ್ಧ ಉಪಾಧ್ಯಕ್ಷೆ ಚೈತ್ರಾ, ಸದಸ್ಯರಾದ ವಿಶಾಲಕ್ಷಿ, ಕವಿತಾ, ಪೂವಮ್ಮ, ಚಾಮದಾಸಯ್ಯ, ರೂಪಾ, ರಾಜಮ್ಮ, ಮಣಿಕಂಠಸ್ವಾಮಿ, ನಾಗರತ್ನಮ್ಮ, ಶೈಲಜಾ, ಶಂಕರ್, ಸಿ.ಶಿವಣ್ಣಗೌಡ, ಮಹಾದೇವಶೆಟ್ಟಿ ಒಳಗೊಂಡ ೧೩ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾದರು.
ಇದನ್ನು ಪರಿಶೀಲಿಸಿದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರು ೧೩ ಮಂದಿ ಸದಸ್ಯರ ಅವಿಶ್ವಾಸ ನಿರ್ಣಯವನ್ನು ಗಣನೆಗೆ ತೆಗೆದುಕೊಂಡು ಸದಸ್ಯರಿಂದ ಮಾಹಿತಿ ಪಡೆದು ನಿಯಮದಂತೆ ಅವಿಶ್ವಾಸಕ್ಕೆ ಸಹಿ ಹಾಕಿದ್ದರು. ಅಧ್ಯಕ್ಷರಾಗಿದ್ದ ರವಿಕುಮಾರ್ ಅವರನ್ನು ವಜಾಗೊಳಿಸಿ ಉಪಾಧ್ಯಕ್ಷರಾದ ಚೈತ್ರಾ ಅವರನ್ನು ಪ್ರಭಾರ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಡಿಒ ಚನ್ನಪ್ಪ, ಸದಸ್ಯರು ಇತರರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!