ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು.
ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ ಅತೃಪ್ತಿಕರ ಆಡಳಿತದಿಂದ ಬೇಸತ್ತು ಅವರ ವಿರುದ್ಧ ಉಪಾಧ್ಯಕ್ಷೆ ಚೈತ್ರಾ, ಸದಸ್ಯರಾದ ವಿಶಾಲಕ್ಷಿ, ಕವಿತಾ, ಪೂವಮ್ಮ, ಚಾಮದಾಸಯ್ಯ, ರೂಪಾ, ರಾಜಮ್ಮ, ಮಣಿಕಂಠಸ್ವಾಮಿ, ನಾಗರತ್ನಮ್ಮ, ಶೈಲಜಾ, ಶಂಕರ್, ಸಿ.ಶಿವಣ್ಣಗೌಡ, ಮಹಾದೇವಶೆಟ್ಟಿ ಒಳಗೊಂಡ ೧೩ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾದರು.
ಇದನ್ನು ಪರಿಶೀಲಿಸಿದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರು ೧೩ ಮಂದಿ ಸದಸ್ಯರ ಅವಿಶ್ವಾಸ ನಿರ್ಣಯವನ್ನು ಗಣನೆಗೆ ತೆಗೆದುಕೊಂಡು ಸದಸ್ಯರಿಂದ ಮಾಹಿತಿ ಪಡೆದು ನಿಯಮದಂತೆ ಅವಿಶ್ವಾಸಕ್ಕೆ ಸಹಿ ಹಾಕಿದ್ದರು. ಅಧ್ಯಕ್ಷರಾಗಿದ್ದ ರವಿಕುಮಾರ್ ಅವರನ್ನು ವಜಾಗೊಳಿಸಿ ಉಪಾಧ್ಯಕ್ಷರಾದ ಚೈತ್ರಾ ಅವರನ್ನು ಪ್ರಭಾರ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಡಿಒ ಚನ್ನಪ್ಪ, ಸದಸ್ಯರು ಇತರರಿದ್ದರು.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…