ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು.
ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ ಅತೃಪ್ತಿಕರ ಆಡಳಿತದಿಂದ ಬೇಸತ್ತು ಅವರ ವಿರುದ್ಧ ಉಪಾಧ್ಯಕ್ಷೆ ಚೈತ್ರಾ, ಸದಸ್ಯರಾದ ವಿಶಾಲಕ್ಷಿ, ಕವಿತಾ, ಪೂವಮ್ಮ, ಚಾಮದಾಸಯ್ಯ, ರೂಪಾ, ರಾಜಮ್ಮ, ಮಣಿಕಂಠಸ್ವಾಮಿ, ನಾಗರತ್ನಮ್ಮ, ಶೈಲಜಾ, ಶಂಕರ್, ಸಿ.ಶಿವಣ್ಣಗೌಡ, ಮಹಾದೇವಶೆಟ್ಟಿ ಒಳಗೊಂಡ ೧೩ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾದರು.
ಇದನ್ನು ಪರಿಶೀಲಿಸಿದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರು ೧೩ ಮಂದಿ ಸದಸ್ಯರ ಅವಿಶ್ವಾಸ ನಿರ್ಣಯವನ್ನು ಗಣನೆಗೆ ತೆಗೆದುಕೊಂಡು ಸದಸ್ಯರಿಂದ ಮಾಹಿತಿ ಪಡೆದು ನಿಯಮದಂತೆ ಅವಿಶ್ವಾಸಕ್ಕೆ ಸಹಿ ಹಾಕಿದ್ದರು. ಅಧ್ಯಕ್ಷರಾಗಿದ್ದ ರವಿಕುಮಾರ್ ಅವರನ್ನು ವಜಾಗೊಳಿಸಿ ಉಪಾಧ್ಯಕ್ಷರಾದ ಚೈತ್ರಾ ಅವರನ್ನು ಪ್ರಭಾರ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಡಿಒ ಚನ್ನಪ್ಪ, ಸದಸ್ಯರು ಇತರರಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…