ಜಿಲ್ಲೆಗಳು

ಹೊಂಗನೂರು ಗ್ರಾ.ಪಂ ಅಧ್ಯಕ್ಷರ ಪದಚ್ಯುತಿ :  ಅವಿಶ್ವಾಸ ನಿರ್ಣಯಕ್ಕೆ ಗೆಲುವು

ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು.
ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ ಅತೃಪ್ತಿಕರ ಆಡಳಿತದಿಂದ ಬೇಸತ್ತು ಅವರ ವಿರುದ್ಧ ಉಪಾಧ್ಯಕ್ಷೆ ಚೈತ್ರಾ, ಸದಸ್ಯರಾದ ವಿಶಾಲಕ್ಷಿ, ಕವಿತಾ, ಪೂವಮ್ಮ, ಚಾಮದಾಸಯ್ಯ, ರೂಪಾ, ರಾಜಮ್ಮ, ಮಣಿಕಂಠಸ್ವಾಮಿ, ನಾಗರತ್ನಮ್ಮ, ಶೈಲಜಾ, ಶಂಕರ್, ಸಿ.ಶಿವಣ್ಣಗೌಡ, ಮಹಾದೇವಶೆಟ್ಟಿ ಒಳಗೊಂಡ ೧೩ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾದರು.
ಇದನ್ನು ಪರಿಶೀಲಿಸಿದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರು ೧೩ ಮಂದಿ ಸದಸ್ಯರ ಅವಿಶ್ವಾಸ ನಿರ್ಣಯವನ್ನು ಗಣನೆಗೆ ತೆಗೆದುಕೊಂಡು ಸದಸ್ಯರಿಂದ ಮಾಹಿತಿ ಪಡೆದು ನಿಯಮದಂತೆ ಅವಿಶ್ವಾಸಕ್ಕೆ ಸಹಿ ಹಾಕಿದ್ದರು. ಅಧ್ಯಕ್ಷರಾಗಿದ್ದ ರವಿಕುಮಾರ್ ಅವರನ್ನು ವಜಾಗೊಳಿಸಿ ಉಪಾಧ್ಯಕ್ಷರಾದ ಚೈತ್ರಾ ಅವರನ್ನು ಪ್ರಭಾರ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಡಿಒ ಚನ್ನಪ್ಪ, ಸದಸ್ಯರು ಇತರರಿದ್ದರು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

1 hour ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago