ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು.
ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ ಅತೃಪ್ತಿಕರ ಆಡಳಿತದಿಂದ ಬೇಸತ್ತು ಅವರ ವಿರುದ್ಧ ಉಪಾಧ್ಯಕ್ಷೆ ಚೈತ್ರಾ, ಸದಸ್ಯರಾದ ವಿಶಾಲಕ್ಷಿ, ಕವಿತಾ, ಪೂವಮ್ಮ, ಚಾಮದಾಸಯ್ಯ, ರೂಪಾ, ರಾಜಮ್ಮ, ಮಣಿಕಂಠಸ್ವಾಮಿ, ನಾಗರತ್ನಮ್ಮ, ಶೈಲಜಾ, ಶಂಕರ್, ಸಿ.ಶಿವಣ್ಣಗೌಡ, ಮಹಾದೇವಶೆಟ್ಟಿ ಒಳಗೊಂಡ ೧೩ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾದರು.
ಇದನ್ನು ಪರಿಶೀಲಿಸಿದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರು ೧೩ ಮಂದಿ ಸದಸ್ಯರ ಅವಿಶ್ವಾಸ ನಿರ್ಣಯವನ್ನು ಗಣನೆಗೆ ತೆಗೆದುಕೊಂಡು ಸದಸ್ಯರಿಂದ ಮಾಹಿತಿ ಪಡೆದು ನಿಯಮದಂತೆ ಅವಿಶ್ವಾಸಕ್ಕೆ ಸಹಿ ಹಾಕಿದ್ದರು. ಅಧ್ಯಕ್ಷರಾಗಿದ್ದ ರವಿಕುಮಾರ್ ಅವರನ್ನು ವಜಾಗೊಳಿಸಿ ಉಪಾಧ್ಯಕ್ಷರಾದ ಚೈತ್ರಾ ಅವರನ್ನು ಪ್ರಭಾರ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಡಿಒ ಚನ್ನಪ್ಪ, ಸದಸ್ಯರು ಇತರರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…