ಮೈಸೂರು: ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ಚಾಣಕ್ಯ.ಕೇಂದ್ರದಲ್ಲಿ ಇರೋದು ನಮ್ಮದೇ ಸರ್ಕಾರ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಹೆದರಿಕೆ ಏಕೆ? ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು.
ನರಸಿಂಹರಾಜ ಕ್ಷೇತ್ರದ ವಾರ್ಡ್ ನಂರ್ಬ ೩೦ ರಿಂದ ವಿಜಯ ಸಂಕಲ್ಪ ಆರಂಭವಾಗಿದೆ. ಈ ಬಾರಿ ಈ ಕ್ಷೇತ್ರದಿಂದ ನೂರಕ್ಕೆ ನೂರರಷ್ಟು ಬಿಜೆಪಿ ಶಾಸಕರು ಆಯ್ಕೆಯಾಗಲಿದ್ದಾರೆ. ಶಾಸಕರ ಆಯ್ಕೆ ಹಿಂದೆ ಕಾರ್ಯಕರ್ತರ ಶ್ರಮ ಅಡಗಿದೆ ಎಂದು ಹೇಳಿದರು.ಐದು ವರ್ಷದಲ್ಲಿ ಕೇಂದ್ರ ಮತ್ತು ರಾಜ್ಯದ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಬೇಕು. ಬೂತ್ ಮಟ್ಟದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ತೀವತ್ಸ, ಮಾಜಿ ಮೇಯರ್ ಸಂದೇಶ್ ಸ್ವಾಮಿ, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷರಾದ ಭಾನುಪ್ರಕಾಶ್, ಮಾಜಿ ಶಾಸಕರಾದ ನಂಜುಂಡಸ್ವಾಮಿ, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…