ಜಿಲ್ಲೆಗಳು

ಪರಿಸರ ಏರುಪೇರಿಗೆ ಮನುಷ್ಯರೇ ಕಾರಣ: ರವಿ ಕಾಳಪ್ಪ

ಮಡಿಕೇರಿ: ಪ್ರಕೃತಿ ಆರೋಗ್ಯಯುತವಾಗಿರಬೇಕಾದರೆ ನಮ್ಮೆಲ್ಲರ ಮೇಲೆ ಹೊಣೆಗಾರಿಕೆ ಹೆಚ್ಚಿರುತ್ತದೆ. ಪ್ರಾಣಿ, ಪಕ್ಷಿಗಳು ಹಾಗೂ ಇತರೆ ಜೀವ ಜಂತುಗಳಿದ್ದರೆ ಮಾತ್ರ ಪರಿಸರ ಸಮತೋಲನದಿಂದ ಕೂಡಿರುತ್ತದೆ. ಪ್ರಸ್ತುತ ದಿನಗಳಲ್ಲಿ ವಾತಾವರಣದಲ್ಲಿನ ಏರುಪೇರಿಗೆ ಮನುಷ್ಯರೇ ಕಾರಣ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದರು.

ಅರಣ್ಯ ಇಲಾಖೆ, ಮಡಿಕೇರಿ ವನ್ಯಜೀವಿ ವಿಭಾಗ, ಭಾಗಮಂಡಲ ವಲಯ ವನ್ಯಜೀವಿ ವಿಭಾಗದ ಸಹಯೋಗದಲ್ಲಿ ವನ್ಯಜೀವಿ ಸಪ್ತಾಹ ಅಂಗವಾಗಿ ತಲಕಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರೂ ದಿನದಲ್ಲಿ ಐದು ನಿಮಿಷ ಸಮಯವನ್ನು ಪರಿಸರ ಸ್ವಚ್ಛತೆಗಾಗಿ ಮೀಸಲಿಡಬೇಕು. ಎಲ್ಲರೂ ಕೈಜೋಡಿಸಿದಾಗ ವಾತಾವರಣ ಸ್ವಚ್ಛಂದವಾಗಿರುತ್ತದೆ. ನಾವು ಜಾಗೃತರಾಗುವ ಜತೆಗೆ ಸ್ವಚ್ಛತೆ ಬಗ್ಗೆ ಇತರರಿಗೆ ಅರಿವು ಮೂಡಿಸಬೇಕು ಎಂದು ತಿಳಿ ಹೇಳಿದರು.

ಬಳಿಕ ತಲಕಾವೇರಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ರವಿ ಕಾಳಪ್ಪ ಪಾಲ್ಗೊಂಡರು. ಈ ವೇಳೆ ಕ್ಷೇತ್ರಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು. ಅರಣ್ಯ ರಕ್ಷಕರು, ಇಲಾಖೆ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಎಸಿಎಫ್ ಶ್ರೀನಿವಾಸ್, ಆರ್‌ಎಫ್‌ಒ ಕೊಟ್ರೇಶ್, ಡಿಆರ್‌ಎಫ್‌ಒಗಳಾದ ಆನಂದ್, ಶ್ರೀಧರ್, ರಾಜ್ಯ ವಿಜ್ಞಾನ ಪರಿಷತ್‌ನ ಟಿ.ಜಿ.ಪ್ರೇಮ್ ಕುವಾರ್ ಹಾಜರಿದ್ದರು.

ತಲಕಾವೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ನಾಪಂಡ ರವಿ ಕಾಳಪ್ಪ ಚಾಲನೆ ನೀಡಿದರು. ಶ್ರೀನಿವಾಸ್, ಕೊಟ್ರೇಶ್, ಆನಂದ್, ಶ್ರೀಧರ್, ಟಿ.ಜಿ.ಪ್ರೇಮ್ ಕುಮಾರ್ ಮತ್ತಿತರರಿದ್ದರು

andolana

Recent Posts

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಐನ್‌ಸ್ಟೀನ್‌ ಕಂಡಂತೆ ಮಹಾತ್ಮ ಗಾಂಧೀಜಿ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…

14 mins ago

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

26 mins ago

ಕರ ಭಾರದ ನಡುವೆ ಘನ ತ್ಯಾಜ್ಯ ವಿಲೇವಾರಿಗೂ ಸೆಸ್‌

ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್‌ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…

52 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 25 ಶನಿವಾರ

1 hour ago

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

11 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

11 hours ago