ಜಿಲ್ಲೆಗಳು

ಹುಣಸೂರು ಜಿಟಿಟಿಸಿ ಕೇಂದ್ರಕ್ಕೆ ಚಾಲನೆ, ವರ್ಷಕ್ಕೆ 500 ಯುವಜನರಿಗೆ ತರಬೇತಿ: ಅಶ್ವತ್ಥನಾರಾಯಣ

ಹುಣಸೂರು: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು (ಜಿಟಿಟಿಸಿ) ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಇಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಿಟಿಟಿಸಿ ಕೇಂದ್ರದಲ್ಲಿ ಪ್ರತೀ ವರ್ಷವೂ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ಕೌಶಲ್ಯಗಳಿರುವ ತರಬೇತಿ ನೀಡಿ, ಅವರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲಾಗುವುದು. ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಲಿತವರು ಕೂಡ ತರಬೇತಿ ಪಡೆದುಕೊಳ್ಳಬಹುದು. ಇದ್ಯಾವುದಕ್ಕೂ ವಿದ್ಯಾರ್ಥಿಗಳ ಬಳಿ ಸರ್ಕಾರವು ನಯಾಪೈಸೆ ಶುಲ್ಕವನ್ನೂ ತೆಗೆದುಕೊಳ್ಳದೆ, ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಿದೆ ಎಂದರು.

ಈ ಕೇಂದ್ರದಲ್ಲಿ ಡೈಯಿಂಗ್, ಫಿಟ್ಟರ್, ಮೆಟಲರ್ಜಿ ಸೇರಿದಂತೆ 10ಕ್ಕೂ ಹೆಚ್ಚು ಆಧುನಿಕ ಕೋರ್ಸುಗಳಿವೆ, ಇವುಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿ ತರಬೇತಿಗಳೆರಡೂ ಇವೆ. ಮುಂಬರುವ ದಿನಗಳಲ್ಲಿ ಈ ಜಿಟಿಟಿಸಿಯಲ್ಲಿ ಮತ್ತಷ್ಟು ಕೋರ್ಸುಗಳನ್ನು ಆರಂಭಿಸಲಾಗುವುದು. ಕರ್ನಾಟಕದ ಈ ಮಾದರಿಯನ್ನು ತಮಿಳುನಾಡು, ಅಸ್ಸಾಂ ಮುಂತಾದ ರಾಜ್ಯಗಳೂ ಅನುಕರಿಸುತ್ತಿವೆ ಎಂದು ಅವರು ವಿವರಿಸಿದರು.

ರಾಜ್ಯ ಸರಕಾರವು ಯುವಜನರಲ್ಲಿ ಕೌಶಲ್ಯ ತರಬೇತಿಗೆ ಆದ್ಯತೆ ಕೊಟ್ಟಿದೆ. ಹಿಂದೆಲ್ಲ ವರ್ಷಕ್ಕೆ ಕೇವಲ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಕೌಶಲ್ಯ ತರಬೇತಿ ಕೊಡಲಾಗುತ್ತಿತ್ತು. ಈಗ ಈ ಸಂಖ್ಯೆ ಹಲವು ಲಕ್ಷಗಳಿಗೆ ಏರಿದೆ. ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿದ್ದು, ಯುವಜನರಲ್ಲಿರುವ ಕೊರತೆಗಳನ್ನು ಗಮನಿಸಿ, ಅದಕ್ಕೆ ತಕ್ಕಂತೆ ಸರಕಾರವೇ ಉಚಿತ ತರಬೇತಿಗೆ ವ್ಯವಸ್ಥೆ ಮಾಡುತ್ತಿದೆ ಎಂದು ಅವರು ನುಡಿದರು.

4,500 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ 150 ಐಟಿಐಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಉಳಿದಿರುವ 30 ಐಟಿಐಗಳನ್ನು ಈ ವರ್ಷ ಉನ್ನತೀಕರಿಸಲಾಗುವುದು. ಇದಕ್ಕಾಗಿ ಯೋಜನೆಯನ್ನು ಸಿದ್ಶಪಡಿಸಲಾಗುತ್ತಿದೆ. ಹಾಗೆಯೇ ಪಾಲಿಟೆಕ್ನಿಕ್‌ಗಳಲ್ಲಿ ಶೇಕಡ 100ರಷ್ಟು ದಾಖಲಾತಿ ಆಗುವಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಲಾಗುತ್ತಿದೆ. ಜಿಟಿಟಿಸಿಗಳಿಗಂತೂ ಈಚಿನ ವರ್ಷಗಳಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಇಡೀ ದೇಶದಲ್ಲೇ ಅತ್ಯಂತ ಕಡಿಮೆ ಪ್ರಮಾಣದ ನಿರುದ್ಯೋಗ ಹೊಂದಿರುವ ರಾಜ್ಯವೆಂದರೆ ಕರ್ನಾಟಕ ಮಾತ್ರ. ಆಯಾ ಕಾಲಕ್ಕೆ ತಕ್ಕ ನೀತಿಗಳನ್ನು ರೂಪಿಸಿಕೊಂಡು, ಹೊಸತನಕ್ಕೆ ತೆರೆದುಕೊಳ್ಳುತ್ತಿರುವುದರಿಂದ ಇದು ಸಾಧ್ಯವಾಗಿದೆ. ಇದರ ಜತೆಗೆ ತಂತ್ರಜ್ಞಾನದ ಅನ್ವಯಿಕತೆಯು ರಾಜ್ಯದ ಶಕ್ತಿಯಾಗಿದೆ. ಹೀಗಾಗಿ ಇಡೀ ದೇಶದ ಎಲ್ಲಾ ಭಾಗಗಳಿಂದಲೂ ನಮ್ಮಲ್ಲಿಗೆ ಉದ್ಯೋಗ ಅರಸಿಕೊಂಡು ಬರುವವರ ಸಂಖ್ಯೆ ಜಾಸ್ತಿ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಮಾತನಾಡಿದರು. ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

1 hour ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

2 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

2 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

2 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

3 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

3 hours ago