ಜಿಲ್ಲೆಗಳು

ಹುಣಸೂರು ಜಿಟಿಟಿಸಿ ಕೇಂದ್ರಕ್ಕೆ ಚಾಲನೆ, ವರ್ಷಕ್ಕೆ 500 ಯುವಜನರಿಗೆ ತರಬೇತಿ: ಅಶ್ವತ್ಥನಾರಾಯಣ

ಹುಣಸೂರು: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು (ಜಿಟಿಟಿಸಿ) ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಇಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಿಟಿಟಿಸಿ ಕೇಂದ್ರದಲ್ಲಿ ಪ್ರತೀ ವರ್ಷವೂ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ಕೌಶಲ್ಯಗಳಿರುವ ತರಬೇತಿ ನೀಡಿ, ಅವರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲಾಗುವುದು. ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಲಿತವರು ಕೂಡ ತರಬೇತಿ ಪಡೆದುಕೊಳ್ಳಬಹುದು. ಇದ್ಯಾವುದಕ್ಕೂ ವಿದ್ಯಾರ್ಥಿಗಳ ಬಳಿ ಸರ್ಕಾರವು ನಯಾಪೈಸೆ ಶುಲ್ಕವನ್ನೂ ತೆಗೆದುಕೊಳ್ಳದೆ, ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಿದೆ ಎಂದರು.

ಈ ಕೇಂದ್ರದಲ್ಲಿ ಡೈಯಿಂಗ್, ಫಿಟ್ಟರ್, ಮೆಟಲರ್ಜಿ ಸೇರಿದಂತೆ 10ಕ್ಕೂ ಹೆಚ್ಚು ಆಧುನಿಕ ಕೋರ್ಸುಗಳಿವೆ, ಇವುಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿ ತರಬೇತಿಗಳೆರಡೂ ಇವೆ. ಮುಂಬರುವ ದಿನಗಳಲ್ಲಿ ಈ ಜಿಟಿಟಿಸಿಯಲ್ಲಿ ಮತ್ತಷ್ಟು ಕೋರ್ಸುಗಳನ್ನು ಆರಂಭಿಸಲಾಗುವುದು. ಕರ್ನಾಟಕದ ಈ ಮಾದರಿಯನ್ನು ತಮಿಳುನಾಡು, ಅಸ್ಸಾಂ ಮುಂತಾದ ರಾಜ್ಯಗಳೂ ಅನುಕರಿಸುತ್ತಿವೆ ಎಂದು ಅವರು ವಿವರಿಸಿದರು.

ರಾಜ್ಯ ಸರಕಾರವು ಯುವಜನರಲ್ಲಿ ಕೌಶಲ್ಯ ತರಬೇತಿಗೆ ಆದ್ಯತೆ ಕೊಟ್ಟಿದೆ. ಹಿಂದೆಲ್ಲ ವರ್ಷಕ್ಕೆ ಕೇವಲ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಕೌಶಲ್ಯ ತರಬೇತಿ ಕೊಡಲಾಗುತ್ತಿತ್ತು. ಈಗ ಈ ಸಂಖ್ಯೆ ಹಲವು ಲಕ್ಷಗಳಿಗೆ ಏರಿದೆ. ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿದ್ದು, ಯುವಜನರಲ್ಲಿರುವ ಕೊರತೆಗಳನ್ನು ಗಮನಿಸಿ, ಅದಕ್ಕೆ ತಕ್ಕಂತೆ ಸರಕಾರವೇ ಉಚಿತ ತರಬೇತಿಗೆ ವ್ಯವಸ್ಥೆ ಮಾಡುತ್ತಿದೆ ಎಂದು ಅವರು ನುಡಿದರು.

4,500 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ 150 ಐಟಿಐಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಉಳಿದಿರುವ 30 ಐಟಿಐಗಳನ್ನು ಈ ವರ್ಷ ಉನ್ನತೀಕರಿಸಲಾಗುವುದು. ಇದಕ್ಕಾಗಿ ಯೋಜನೆಯನ್ನು ಸಿದ್ಶಪಡಿಸಲಾಗುತ್ತಿದೆ. ಹಾಗೆಯೇ ಪಾಲಿಟೆಕ್ನಿಕ್‌ಗಳಲ್ಲಿ ಶೇಕಡ 100ರಷ್ಟು ದಾಖಲಾತಿ ಆಗುವಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಲಾಗುತ್ತಿದೆ. ಜಿಟಿಟಿಸಿಗಳಿಗಂತೂ ಈಚಿನ ವರ್ಷಗಳಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಇಡೀ ದೇಶದಲ್ಲೇ ಅತ್ಯಂತ ಕಡಿಮೆ ಪ್ರಮಾಣದ ನಿರುದ್ಯೋಗ ಹೊಂದಿರುವ ರಾಜ್ಯವೆಂದರೆ ಕರ್ನಾಟಕ ಮಾತ್ರ. ಆಯಾ ಕಾಲಕ್ಕೆ ತಕ್ಕ ನೀತಿಗಳನ್ನು ರೂಪಿಸಿಕೊಂಡು, ಹೊಸತನಕ್ಕೆ ತೆರೆದುಕೊಳ್ಳುತ್ತಿರುವುದರಿಂದ ಇದು ಸಾಧ್ಯವಾಗಿದೆ. ಇದರ ಜತೆಗೆ ತಂತ್ರಜ್ಞಾನದ ಅನ್ವಯಿಕತೆಯು ರಾಜ್ಯದ ಶಕ್ತಿಯಾಗಿದೆ. ಹೀಗಾಗಿ ಇಡೀ ದೇಶದ ಎಲ್ಲಾ ಭಾಗಗಳಿಂದಲೂ ನಮ್ಮಲ್ಲಿಗೆ ಉದ್ಯೋಗ ಅರಸಿಕೊಂಡು ಬರುವವರ ಸಂಖ್ಯೆ ಜಾಸ್ತಿ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಮಾತನಾಡಿದರು. ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

2 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

2 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

2 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

2 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

14 hours ago