ಜಿಲ್ಲೆಗಳು

ಹುಣಸೂರು ಜಿಟಿಟಿಸಿ ಕೇಂದ್ರಕ್ಕೆ ಚಾಲನೆ, ವರ್ಷಕ್ಕೆ 500 ಯುವಜನರಿಗೆ ತರಬೇತಿ: ಅಶ್ವತ್ಥನಾರಾಯಣ

ಹುಣಸೂರು: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು (ಜಿಟಿಟಿಸಿ) ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಇಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಿಟಿಟಿಸಿ ಕೇಂದ್ರದಲ್ಲಿ ಪ್ರತೀ ವರ್ಷವೂ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ಕೌಶಲ್ಯಗಳಿರುವ ತರಬೇತಿ ನೀಡಿ, ಅವರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲಾಗುವುದು. ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಲಿತವರು ಕೂಡ ತರಬೇತಿ ಪಡೆದುಕೊಳ್ಳಬಹುದು. ಇದ್ಯಾವುದಕ್ಕೂ ವಿದ್ಯಾರ್ಥಿಗಳ ಬಳಿ ಸರ್ಕಾರವು ನಯಾಪೈಸೆ ಶುಲ್ಕವನ್ನೂ ತೆಗೆದುಕೊಳ್ಳದೆ, ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಿದೆ ಎಂದರು.

ಈ ಕೇಂದ್ರದಲ್ಲಿ ಡೈಯಿಂಗ್, ಫಿಟ್ಟರ್, ಮೆಟಲರ್ಜಿ ಸೇರಿದಂತೆ 10ಕ್ಕೂ ಹೆಚ್ಚು ಆಧುನಿಕ ಕೋರ್ಸುಗಳಿವೆ, ಇವುಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿ ತರಬೇತಿಗಳೆರಡೂ ಇವೆ. ಮುಂಬರುವ ದಿನಗಳಲ್ಲಿ ಈ ಜಿಟಿಟಿಸಿಯಲ್ಲಿ ಮತ್ತಷ್ಟು ಕೋರ್ಸುಗಳನ್ನು ಆರಂಭಿಸಲಾಗುವುದು. ಕರ್ನಾಟಕದ ಈ ಮಾದರಿಯನ್ನು ತಮಿಳುನಾಡು, ಅಸ್ಸಾಂ ಮುಂತಾದ ರಾಜ್ಯಗಳೂ ಅನುಕರಿಸುತ್ತಿವೆ ಎಂದು ಅವರು ವಿವರಿಸಿದರು.

ರಾಜ್ಯ ಸರಕಾರವು ಯುವಜನರಲ್ಲಿ ಕೌಶಲ್ಯ ತರಬೇತಿಗೆ ಆದ್ಯತೆ ಕೊಟ್ಟಿದೆ. ಹಿಂದೆಲ್ಲ ವರ್ಷಕ್ಕೆ ಕೇವಲ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಕೌಶಲ್ಯ ತರಬೇತಿ ಕೊಡಲಾಗುತ್ತಿತ್ತು. ಈಗ ಈ ಸಂಖ್ಯೆ ಹಲವು ಲಕ್ಷಗಳಿಗೆ ಏರಿದೆ. ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿದ್ದು, ಯುವಜನರಲ್ಲಿರುವ ಕೊರತೆಗಳನ್ನು ಗಮನಿಸಿ, ಅದಕ್ಕೆ ತಕ್ಕಂತೆ ಸರಕಾರವೇ ಉಚಿತ ತರಬೇತಿಗೆ ವ್ಯವಸ್ಥೆ ಮಾಡುತ್ತಿದೆ ಎಂದು ಅವರು ನುಡಿದರು.

4,500 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ 150 ಐಟಿಐಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಉಳಿದಿರುವ 30 ಐಟಿಐಗಳನ್ನು ಈ ವರ್ಷ ಉನ್ನತೀಕರಿಸಲಾಗುವುದು. ಇದಕ್ಕಾಗಿ ಯೋಜನೆಯನ್ನು ಸಿದ್ಶಪಡಿಸಲಾಗುತ್ತಿದೆ. ಹಾಗೆಯೇ ಪಾಲಿಟೆಕ್ನಿಕ್‌ಗಳಲ್ಲಿ ಶೇಕಡ 100ರಷ್ಟು ದಾಖಲಾತಿ ಆಗುವಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಲಾಗುತ್ತಿದೆ. ಜಿಟಿಟಿಸಿಗಳಿಗಂತೂ ಈಚಿನ ವರ್ಷಗಳಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಇಡೀ ದೇಶದಲ್ಲೇ ಅತ್ಯಂತ ಕಡಿಮೆ ಪ್ರಮಾಣದ ನಿರುದ್ಯೋಗ ಹೊಂದಿರುವ ರಾಜ್ಯವೆಂದರೆ ಕರ್ನಾಟಕ ಮಾತ್ರ. ಆಯಾ ಕಾಲಕ್ಕೆ ತಕ್ಕ ನೀತಿಗಳನ್ನು ರೂಪಿಸಿಕೊಂಡು, ಹೊಸತನಕ್ಕೆ ತೆರೆದುಕೊಳ್ಳುತ್ತಿರುವುದರಿಂದ ಇದು ಸಾಧ್ಯವಾಗಿದೆ. ಇದರ ಜತೆಗೆ ತಂತ್ರಜ್ಞಾನದ ಅನ್ವಯಿಕತೆಯು ರಾಜ್ಯದ ಶಕ್ತಿಯಾಗಿದೆ. ಹೀಗಾಗಿ ಇಡೀ ದೇಶದ ಎಲ್ಲಾ ಭಾಗಗಳಿಂದಲೂ ನಮ್ಮಲ್ಲಿಗೆ ಉದ್ಯೋಗ ಅರಸಿಕೊಂಡು ಬರುವವರ ಸಂಖ್ಯೆ ಜಾಸ್ತಿ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಮಾತನಾಡಿದರು. ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

3 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

7 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

7 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

8 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

8 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

9 hours ago