ಬೆಳಗಾವಿ-ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆಗಳ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಇನ್ನೇಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.
ಶಾಸಕ ಮಂಜುನಾಥ್ ಎಚ್.ಪಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಆಸ್ಪತ್ರೆ ಹಿಂದೆಯೇ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಹೆಚ್ಚುವರಿ ಕಾಮಗಾರಿ ನಡೆಸುತ್ತಿರುವ ಕಾರಣ ವಿಳಂಬವಾಗಿದೆ. 9.95ಕೋಟಿ ಪರಿಷ್ಕøತ ಅಂದಾಜು ಮೊತ್ತದ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕರೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವುದಾಗಿ ತಿಳಿಸಿದರು.
ಈ ಮೊದಲು 12-12-2018ರಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿತ್ತು. ಆರ್ಐಡಿಎಫ್ ನಬಾರ್ಡ್ 23 ಯೋಜನೆಯಡಿ 25 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿತ್ತು. ಅರುಣಾ ಕನ್ಸ್ಟ್ರಕ್ಷನ್ ಪ್ರವೈಟ್ ಲಿಮಿಟೆಡ್ ಇವರಿಗೆ ಟೆಂಡರ್ ನೀಡಾಗಿದ್ದು, 18 ತಿಂಗಳು ಕಾಲಾವಧಿಯೊಳಗೆ ಕಾಮಗಾರಿ ಮುಗಿಸಲು ಸೂಚಿಸಲಾಗಿತ್ತು. ಆದರೆ, ಮಳೆಗಾಳ ಬಂದ ಕಾರಣ ವಿಳಂಬವಾಗಿದೆ. ಪುನಃ ಇದರ ಕಾಗಮಾರಿ ಪರಿಷ್ಕರಿಸಿ 31.15 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ನೆಲಮಹಡಿ , ಮೊದಲನೆ ಮಹಡಿ, ಎರಡನೇ ಮಹಡಿ, ಛಾವಣಿ, ವಿದ್ಯುತ್ ಲೈನ್, ಸ್ಯಾನಿಟರಿ, ನೀರು ಸರಬರಾಜು ಪೂರ್ಣಗೊಂಡಿದೆ. ಎಡನೇ ಮಹಡಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಆಸ್ಪತ್ರೆಗೆ ಒಟ್ಟು 94 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಒಂದು ವೇಳೆ ಸಿಬ್ಬಂದಿ ಕೊರತೆ ಇದ್ದರೆ ಹೊರ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲು ಡಿಸಿಗೆ ಅಧಿಕಾರ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ನ ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಅವರು, ಉತ್ತರ ಕನ್ನಡ ಜಿಲ್ಲೆಗೆ ನೀರು ಘೋಷಣೆ ಮಾಡಿದಂತೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಈಗಾಗಲೇ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವಂತೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಶೀಘ್ರದಲ್ಲೇ ಅಧಿಕೃತ ಆದೇಶ ಹೊರಿಡುಸುವುದಾಗಿ ಭರವಸೆ ಕೊಟ್ಟರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…