ಜಿಲ್ಲೆಗಳು

ಹುಣಸೂರು : 100 ಹಾಸಿಗೆಗಳುಳ್ಳ ಸಾರ್ವಜನಿಕ ಆಸ್ಪತ್ರೆ ಇನ್ನೆರಡು ತಿಂಗಳಲ್ಲಿ ಸಿದ್ಧ

ಬೆಳಗಾವಿ-ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆಗಳ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಇನ್ನೇಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.
ಶಾಸಕ ಮಂಜುನಾಥ್ ಎಚ್.ಪಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಆಸ್ಪತ್ರೆ ಹಿಂದೆಯೇ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಹೆಚ್ಚುವರಿ ಕಾಮಗಾರಿ ನಡೆಸುತ್ತಿರುವ ಕಾರಣ ವಿಳಂಬವಾಗಿದೆ. 9.95ಕೋಟಿ ಪರಿಷ್ಕøತ ಅಂದಾಜು ಮೊತ್ತದ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕರೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವುದಾಗಿ ತಿಳಿಸಿದರು.
ಈ ಮೊದಲು 12-12-2018ರಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿತ್ತು. ಆರ್‍ಐಡಿಎಫ್ ನಬಾರ್ಡ್ 23 ಯೋಜನೆಯಡಿ 25 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿತ್ತು. ಅರುಣಾ ಕನ್ಸ್‍ಟ್ರಕ್ಷನ್ ಪ್ರವೈಟ್ ಲಿಮಿಟೆಡ್ ಇವರಿಗೆ ಟೆಂಡರ್ ನೀಡಾಗಿದ್ದು, 18 ತಿಂಗಳು ಕಾಲಾವಧಿಯೊಳಗೆ ಕಾಮಗಾರಿ ಮುಗಿಸಲು ಸೂಚಿಸಲಾಗಿತ್ತು. ಆದರೆ, ಮಳೆಗಾಳ ಬಂದ ಕಾರಣ ವಿಳಂಬವಾಗಿದೆ. ಪುನಃ ಇದರ ಕಾಗಮಾರಿ ಪರಿಷ್ಕರಿಸಿ 31.15 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ನೆಲಮಹಡಿ , ಮೊದಲನೆ ಮಹಡಿ, ಎರಡನೇ ಮಹಡಿ, ಛಾವಣಿ, ವಿದ್ಯುತ್ ಲೈನ್, ಸ್ಯಾನಿಟರಿ, ನೀರು ಸರಬರಾಜು ಪೂರ್ಣಗೊಂಡಿದೆ. ಎಡನೇ ಮಹಡಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಆಸ್ಪತ್ರೆಗೆ ಒಟ್ಟು 94 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಒಂದು ವೇಳೆ ಸಿಬ್ಬಂದಿ ಕೊರತೆ ಇದ್ದರೆ ಹೊರ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲು ಡಿಸಿಗೆ ಅಧಿಕಾರ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್‍ನ ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಅವರು, ಉತ್ತರ ಕನ್ನಡ ಜಿಲ್ಲೆಗೆ ನೀರು ಘೋಷಣೆ ಮಾಡಿದಂತೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಈಗಾಗಲೇ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವಂತೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಶೀಘ್ರದಲ್ಲೇ ಅಧಿಕೃತ ಆದೇಶ ಹೊರಿಡುಸುವುದಾಗಿ ಭರವಸೆ ಕೊಟ್ಟರು.

andolanait

Recent Posts

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

3 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

3 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

18 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

21 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

1 day ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

1 day ago