ಹುಣಸೂರು: ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಹಳ್ಳಿಯಲ್ಲಿ ಆದಿವಾಸಿ ಜೇನುಕುರುಬ ಕುಟುಂಬದ ಗಂಗಮ್ಮ ಮತ್ತು ಶಿವಣ್ಣ ಎಂಬವರ ಮೇಲೆ ಸ್ವಾಮಿಗೌಡ, ಅವರ ಪತ್ನಿ ವಸಂತಕುಮಾರಿ ಹಾಗೂ ಮಗ ಪವನಕುಮಾರ್ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೆ.15ರಂದು ರಾತ್ರಿ ಹಾಡಿಯ ಆದಿವಾಸಿ ಜೇನುಕುರುಬ ಕುಟುಂಬದ ಗಂಗಮ್ಮ ಮತ್ತು ಶಿವಣ್ಣ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಹುಣಸೂರಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪವನ್ ಕುಮಾರ್ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ತಲೆಮರೆಸಿಕೊಂಡಿರುವ ಸ್ವಾಮಿಗೌಡ ಮತ್ತು ಅವರ ಪತ್ನಿ ವಸಂತಕುಮಾರಿ ಅವರನ್ನು ಹುಡುಕುತ್ತಿದ್ದಾರೆ. ಗಾಯಾಳುಗಳು ಹುಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…