ಹುಣಸೂರು: ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಹಳ್ಳಿಯಲ್ಲಿ ಆದಿವಾಸಿ ಜೇನುಕುರುಬ ಕುಟುಂಬದ ಗಂಗಮ್ಮ ಮತ್ತು ಶಿವಣ್ಣ ಎಂಬವರ ಮೇಲೆ ಸ್ವಾಮಿಗೌಡ, ಅವರ ಪತ್ನಿ ವಸಂತಕುಮಾರಿ ಹಾಗೂ ಮಗ ಪವನಕುಮಾರ್ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೆ.15ರಂದು ರಾತ್ರಿ ಹಾಡಿಯ ಆದಿವಾಸಿ ಜೇನುಕುರುಬ ಕುಟುಂಬದ ಗಂಗಮ್ಮ ಮತ್ತು ಶಿವಣ್ಣ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಹುಣಸೂರಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪವನ್ ಕುಮಾರ್ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ತಲೆಮರೆಸಿಕೊಂಡಿರುವ ಸ್ವಾಮಿಗೌಡ ಮತ್ತು ಅವರ ಪತ್ನಿ ವಸಂತಕುಮಾರಿ ಅವರನ್ನು ಹುಡುಕುತ್ತಿದ್ದಾರೆ. ಗಾಯಾಳುಗಳು ಹುಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…