ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ ರವಿ ಎಂಬುವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.
ಚಿಕ್ಕಬೀಚನಹಳ್ಳಿಯ ಸಿದ್ದೇಗೌಡ ಅವರು ಪತ್ನಿ ಚಿಕ್ಕಮ್ಮ ಅವರೊಂದಿಗೆ ಬೆಳಿಗ್ಗೆ ಹುರುಳಿ ಕಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬವರ ಮೇಲು ಆನೆ ದಾಳಿ ಮಾಡಿದೆ.
ಮೃತ ಕುಟುಂಬಸ್ಥರ ಮನೆಗೆ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…
ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್ಪಾತ್ನಲ್ಲಿರುವ ಮ್ಯಾನ್ ಹೋಲ್ನಲ್ಲಿ ಕಸ…