ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ ರವಿ ಎಂಬುವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.
ಚಿಕ್ಕಬೀಚನಹಳ್ಳಿಯ ಸಿದ್ದೇಗೌಡ ಅವರು ಪತ್ನಿ ಚಿಕ್ಕಮ್ಮ ಅವರೊಂದಿಗೆ ಬೆಳಿಗ್ಗೆ ಹುರುಳಿ ಕಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬವರ ಮೇಲು ಆನೆ ದಾಳಿ ಮಾಡಿದೆ.
ಮೃತ ಕುಟುಂಬಸ್ಥರ ಮನೆಗೆ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…