ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ ರವಿ ಎಂಬುವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.
ಚಿಕ್ಕಬೀಚನಹಳ್ಳಿಯ ಸಿದ್ದೇಗೌಡ ಅವರು ಪತ್ನಿ ಚಿಕ್ಕಮ್ಮ ಅವರೊಂದಿಗೆ ಬೆಳಿಗ್ಗೆ ಹುರುಳಿ ಕಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬವರ ಮೇಲು ಆನೆ ದಾಳಿ ಮಾಡಿದೆ.
ಮೃತ ಕುಟುಂಬಸ್ಥರ ಮನೆಗೆ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…