ಜಿಲ್ಲೆಗಳು

ಬಿಳಿಕೆರೆ ಬಳಿ ಬೆಳ್ಳಂಬೆಳಗ್ಗೆ ಆನೆ ದಾಳಿ: ಮಹಿಳೆ ಸಾವು

ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ ರವಿ ಎಂಬುವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.

ಚಿಕ್ಕಬೀಚನಹಳ್ಳಿಯ ಸಿದ್ದೇಗೌಡ ಅವರು ಪತ್ನಿ ಚಿಕ್ಕಮ್ಮ ಅವರೊಂದಿಗೆ ಬೆಳಿಗ್ಗೆ ಹುರುಳಿ ಕಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬವರ ಮೇಲು ಆನೆ ದಾಳಿ ಮಾಡಿದೆ.

ಮೃತ ಕುಟುಂಬಸ್ಥರ ಮನೆಗೆ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

8 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

8 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

8 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

8 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

8 hours ago