ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಆನೆ ದಾಳಿಗೆ ಸಿಲುಕಿ ಮಹಿಳೆ ಚಿಕ್ಕಮ್ಮ (60) ಮೃತಪಟ್ಟಿದ್ದು ನಂತರ ಇದೇ ಆನೆ ಬಿಳಿಕೆರೆ ಗ್ರಾಮದ ರವಿ ಎಂಬುವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.
ಚಿಕ್ಕಬೀಚನಹಳ್ಳಿಯ ಸಿದ್ದೇಗೌಡ ಅವರು ಪತ್ನಿ ಚಿಕ್ಕಮ್ಮ ಅವರೊಂದಿಗೆ ಬೆಳಿಗ್ಗೆ ಹುರುಳಿ ಕಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬವರ ಮೇಲು ಆನೆ ದಾಳಿ ಮಾಡಿದೆ.
ಮೃತ ಕುಟುಂಬಸ್ಥರ ಮನೆಗೆ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…