ಜಿಲ್ಲೆಗಳು

ಹನೂರು : ವ್ಯಕ್ತಿಯೋರ್ವ ಅನುಮಾನಸ್ಪದ ಸಾವು

ಘಟನೆ ವಿವರ : ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಕುಮಾರ್ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದ, ಅದರಂತೆ ಡಿ.27 ರಂದು ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಇದೇ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಆರೋಗ್ಯ ಸ್ವಾಮಿ ದೂರವಾಣಿ ಕರೆ ಮಾಡಿ ನೀನೊಬ್ಬನೇ ಜಮೀನಿನ ಬಳಿಗೆ ಬಾ ಎಂದು ತಿಳಿಸಿದ್ದಾನೆ ಈ ಸಂದರ್ಭದಲ್ಲಿ ತನ್ನ ಟಿವಿಎಸ್ ಬೈಕ್ ನಲ್ಲಿ ಪ್ರತಾಪ್ ರವರ ಜಮೀನಿಗೆ ತೆರಳಿದ್ದಾನೆ. ಆನಂತರ ವಾಪಸ್ ಮನೆಗೆ ಬಾರದಿದ್ದರಿಂದ ಜಮೀನಿಗೆ ಹೋಗಿ ನೋಡಿದ ವೇಳೆ ಅಂಗಾತವಾಗಿ ಸತ್ತು ಬಿದ್ದಿದ್ದ ಎಂದು ಮೃತ ಕುಮಾರನ ಸಹೋದರ ಮಾದೇಶ್ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲ ನಡೆಸಿ ಕೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶಾಸಕ ನರೇಂದ್ರ ಭೇಟಿ : ಅಲಗೂ ಮೂಲೆ ಗ್ರಾಮದಲ್ಲಿ ಕೊಲೆಯಾಗಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಶಾಸಕ ಆರ್ ನರೇಂದ್ರ ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಗುರುಮಲ್ಲಪ್ಪ ರವರಿಗೆ ಸಾಂತ್ವನ ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಮಾತನಾಡಿ ಮೃತಪಟ್ಟಿರುವ ಕುಮಾರರವರು ಕೊಲೆಯಾಗಿದ್ದಾರೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿಸಿ ತನಿಖೆ ಚುರುಕುಗೊಳಿಸಿ ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವೃತ್ತ ನಿರೀಕ್ಷಕ ಸಂತೋಷ ಕಶ್ಯಪ ರವರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

andolanait

Recent Posts

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…

43 mins ago

ಓದುಗರ ಪತ್ರ: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ನಿರಂತರ ಶಾಪ

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…

45 mins ago

ಓದುಗರ ಪತ್ರ: ಶಾಲೆಗಳಲ್ಲಿ ಕನ್ನಡ ದಿನ ದಿನಪತ್ರಿಕೆಗಳ ಓದು ಕಡ್ಡಾಯವಾಗಲಿ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…

47 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು – ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

50 mins ago

ಸ್ಮಾರಕವಾಗದೇ ಪಾಳು ಬಿದ್ದಿದೆ ಕೆ.ಎಸ್.ನರಸಿಂಹಸ್ವಾಮಿ ಮನೆ

ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…

1 hour ago

ಅಭಿವೃದ್ಧಿ ಹರಿಕಾರ ದುಗ್ಗಹಟ್ಟಿ ವೀರಭದ್ರ

ಜಿ.ಎಲ್.ತ್ರಿಪುರಾಂತಕ  ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು…

1 hour ago