ಜಿಲ್ಲೆಗಳು

ಸಾವಿನಲ್ಲೂ ಒಂದಾದ ಸತಿಪತಿ: ನೀರಿನಲ್ಲಿ ಮುಳುಗಿ ಸಾವು

ಮೈಸೂರು: ಪ್ರೀತಿಸಿ ೫ ತಿಂಗಳ ಹಿಂದೆಯಷ್ಟೇ ಮದುವೆಯಾದ ಜೋಡಿಯೊಂದು ನೀರಿನಲ್ಲಿ ಮುಳುಗಿ ಸಾವಿನಲ್ಲೂ ಒಂದಾಗಿರುವ ದುರಂತ ಘಟನೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು ತಾಲ್ಲೂಕಿನ ಶಾದನಹಳ್ಳಿ ಗ್ರಾಮದ ನಿವಾಸಿಗಳಾದ ಶಿವಕುಮಾರ್(೨೯) ಹಾಗೂ ಕವಿತಾ(೨೫) ಎಂಬುವವರೇ ಮೃತಪಟ್ಟವರು. ಶುಕ್ರವಾರ ಸಂಜೆ ೫ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ. ಇವರು ಶ್ರೀರಂಗಪಟ್ಟಣ ಮೊಗರಳ್ಳಿ ಗ್ರಾಮದಲ್ಲಿ ನೆಲೆಸಿದ್ದರು. ಕೆ.ಆರ್.ಎಸ್ ಬಳಿಯ ವರುಣಾ ಚಾನೆಲ್ ಕಟ್ಟೆ ಮೇಲೆ ಕುಳಿತು ಬಟ್ಟೆ ಒಗೆಯುತ್ತಿದ್ದ ಕವಿತಾ ಆಕಸ್ಮಿಕವಾಗಿ ನೀರಿಗೆ ಜಾರಿ ಬಿದ್ದಿದ್ದಾರೆ. ಪತ್ನಿಯನ್ನ ರಕ್ಷಿಸಲು ಪತಿ ಶಿವಕುಮಾರ್ ಸಹ ನೀರಿಗೆ ಹಾರಿದ್ದಾರೆ. ಆದರೆ, ಇಬ್ಬರೂ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕವಿತಾ ಅವರ ಮೃತ ದೇಹ ಶುಕ್ರವಾರವೇ ಪತ್ತೆಯಾದರೆ, ಶಿವಕುಮಾರ್ ಅವರ ಶವ ಶನಿವಾರ ಪತ್ತೆಯಾಗಿದೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago