ಮೈಸೂರು: ಪ್ರೀತಿಸಿ ೫ ತಿಂಗಳ ಹಿಂದೆಯಷ್ಟೇ ಮದುವೆಯಾದ ಜೋಡಿಯೊಂದು ನೀರಿನಲ್ಲಿ ಮುಳುಗಿ ಸಾವಿನಲ್ಲೂ ಒಂದಾಗಿರುವ ದುರಂತ ಘಟನೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು ತಾಲ್ಲೂಕಿನ ಶಾದನಹಳ್ಳಿ ಗ್ರಾಮದ ನಿವಾಸಿಗಳಾದ ಶಿವಕುಮಾರ್(೨೯) ಹಾಗೂ ಕವಿತಾ(೨೫) ಎಂಬುವವರೇ ಮೃತಪಟ್ಟವರು. ಶುಕ್ರವಾರ ಸಂಜೆ ೫ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ. ಇವರು ಶ್ರೀರಂಗಪಟ್ಟಣ ಮೊಗರಳ್ಳಿ ಗ್ರಾಮದಲ್ಲಿ ನೆಲೆಸಿದ್ದರು. ಕೆ.ಆರ್.ಎಸ್ ಬಳಿಯ ವರುಣಾ ಚಾನೆಲ್ ಕಟ್ಟೆ ಮೇಲೆ ಕುಳಿತು ಬಟ್ಟೆ ಒಗೆಯುತ್ತಿದ್ದ ಕವಿತಾ ಆಕಸ್ಮಿಕವಾಗಿ ನೀರಿಗೆ ಜಾರಿ ಬಿದ್ದಿದ್ದಾರೆ. ಪತ್ನಿಯನ್ನ ರಕ್ಷಿಸಲು ಪತಿ ಶಿವಕುಮಾರ್ ಸಹ ನೀರಿಗೆ ಹಾರಿದ್ದಾರೆ. ಆದರೆ, ಇಬ್ಬರೂ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕವಿತಾ ಅವರ ಮೃತ ದೇಹ ಶುಕ್ರವಾರವೇ ಪತ್ತೆಯಾದರೆ, ಶಿವಕುಮಾರ್ ಅವರ ಶವ ಶನಿವಾರ ಪತ್ತೆಯಾಗಿದೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…