ಜಿಲ್ಲೆಗಳು

ಕೊಡಗಿನಾದ್ಯಂತ ಹುತ್ತರಿ ಸಂಭ್ರಮ

ಧಾನ್ಯಲಕ್ಷ್ಮಿಯನ್ನು ಕರೆ ತಂದು ಮನೆ ತುಂಬಿಸಿಕೊಂಡ ಕೊಡಗಿನ ಜನತೆ

ಮಡಿಕೇರಿ: ಕೊಡಗಿನ ಎಲ್ಲೆಡೆ ಈಗ ಹುತ್ತರಿ ಸಂಭ್ರಮ. ವರ್ಷಪೂರ್ತಿ ಅನ್ನನೀಡೋ ಧಾನ್ಯಲಕ್ಷ್ಮಿಯನ್ನು ಪೂಜಿಸಿ ಮನೆಗೊಯ್ದು ಪೊಲಿ ಪೊಲಿ ದೇವಾ, ಪೊಲಿಯೇ ದೇವಾ ಎಂದು ಶ್ರದ್ಧಾಭಕ್ತಿಯಿಂದ ನಮಿಸುವ ಈ ಹಬ್ಬ ಕೊಡವರ ಪ್ರಮುಖ ಹಬ್ಬ.

ಅಧಿಕೃತವಾಗಿ ಕೊಡಗಿನಾದ್ಯಂತ ಪುತ್ತರಿ ಮಂಗಳವಾರ ರಾತ್ರಿಯಿಂದಲೇ ಆರಂಭವಾಗಿದೆ. ಕೊಡವರ ಕುಲದೈವ ಇಗ್ಗುತಪ್ಪನ ಸನ್ನಿದಿಯಲ್ಲಿ ನೆಲ್ಲಕ್ಕಿಯಲ್ಲಿ ಅಕ್ಕಿ ಹಾಕಿ ನೆರೆಕಟ್ಟುವ ಮೂಲಕ ಇದಕ್ಕೆ ಚಾಲನೆ ನೀಡಲಾಯಿತು.

ಹಬ್ಬದ ಸಂಭ್ರಮದಲ್ಲಿರುವ ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಗದ್ದೆಯಿಂದ ತಂದ ಭತ್ತದ ಪೈರನ್ನು ಕಣದಲ್ಲಿರಿಸಿ ಜಾನಪದ ನೃತ್ಯಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಧಾನ್ಯ ಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ವೇಳೆ ಎಲ್ಲರೂ ಸಾಮೂಹಿಕವಾಗಿ ಕೈಯಲ್ಲಿ ಕತ್ತಿ ಹಿಡಿದು ನೃತ್ಯಮಾಡಿದರು. ಹೊಸ ಅರಿ ಎಂದರೆ ಹೊಸ ಭತ್ತವನ್ನು ಮನೆಗೊಯ್ದು ಪೂಜಿಸಿದರು. ಬಳಿಕ ಕದಿರು ತೆಗೆದ ಭತ್ತದಿಂದ ಪಾಯಸ ತಯಾರಿಸಿ ಮನೆ ಮಂದಿ ಮತ್ತು ನೆಂಟರಿಷ್ಟರೆಲ್ಲರೂ ಸೇವಿಸಿ ಸಂಭ್ರಮಿಸಿದರು. ಹುತ್ತರಿಯ ಪ್ರಯುಕ್ತ ತಂಬಿಟ್ಟು, ವಿಶಿಷ್ಟ ಹುತ್ತರಿ ಗೆಣಸು, ಕಡಂಬಿಟ್ಟು ತಯಾರಿಸುತ್ತಾರೆ. ಬೇರೆ ಬೇರೆ ಕಡೆ ನೆಲೆಸಿರುವ ಎಲ್ಲಾ ಕೊಡವರು ಈ ಹಬ್ಬಕ್ಕೆ ಕೊಡಗಿಗೆ ಬಂದು ನೆಂಟರಿಷ್ಟರ ಜತೆ ಕಲೆಯುತ್ತಾರೆ.

ಪ್ರಕೃತಿಯೊಂದಿಗೆ ಹೊಂದಿಕೊಂಡ ಕೊಡಗಿನ ಜನರ ಆಚಾರದ ಸಂಕೇತವಾಗಿ ಐದು ಬಗೆಯ ಹಸಿರು ಮರದ ಎಲೆಗಳಾದ ಉಂಬಳಿ, ಹಲಸು, ಗೇರು, ಮಾವು ಸೇರಿದಂತೆ ಐದು ಬಗೆಯ ಹಸಿರೆಲೆಗಳನ್ನು ಒಟ್ಟುಗೂಡಿಸಿ ನೆರೆಕಟ್ಟಿ ಗುರುಕಾರಣಿಕರಿಗೆ -ದೈವಕ್ಕೆ ನಮಿಸುವುದು ವಾಡಿಕೆ.

ಪ್ರಾಕೃತಿಕ ವಿಕೋಪ ಮತ್ತು ಕೊರೋನಾದಿಂದ ನಲುಗಿದ ಕೊಡಗಿನಲ್ಲಿ ಮೂರು ವರ್ಷಗಳ ಬಳಿಕ ಹುತ್ತರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾಗುಲು ಐನ್ ಮನೆಯಲ್ಲಿ ರವೀಂದ್ರ ನೇತೃತ್ವದಲ್ಲಿ ಹುತ್ತರಿ ಹಬ್ಬದ ಆಚರಣೆ ನಡೆಯಿತು.

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

22 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

32 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

39 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

49 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago