ಜಿಲ್ಲೆಗಳು

ಕೊಡಗಿನಾದ್ಯಂತ ಹುತ್ತರಿ ಸಂಭ್ರಮ

ಧಾನ್ಯಲಕ್ಷ್ಮಿಯನ್ನು ಕರೆ ತಂದು ಮನೆ ತುಂಬಿಸಿಕೊಂಡ ಕೊಡಗಿನ ಜನತೆ

ಮಡಿಕೇರಿ: ಕೊಡಗಿನ ಎಲ್ಲೆಡೆ ಈಗ ಹುತ್ತರಿ ಸಂಭ್ರಮ. ವರ್ಷಪೂರ್ತಿ ಅನ್ನನೀಡೋ ಧಾನ್ಯಲಕ್ಷ್ಮಿಯನ್ನು ಪೂಜಿಸಿ ಮನೆಗೊಯ್ದು ಪೊಲಿ ಪೊಲಿ ದೇವಾ, ಪೊಲಿಯೇ ದೇವಾ ಎಂದು ಶ್ರದ್ಧಾಭಕ್ತಿಯಿಂದ ನಮಿಸುವ ಈ ಹಬ್ಬ ಕೊಡವರ ಪ್ರಮುಖ ಹಬ್ಬ.

ಅಧಿಕೃತವಾಗಿ ಕೊಡಗಿನಾದ್ಯಂತ ಪುತ್ತರಿ ಮಂಗಳವಾರ ರಾತ್ರಿಯಿಂದಲೇ ಆರಂಭವಾಗಿದೆ. ಕೊಡವರ ಕುಲದೈವ ಇಗ್ಗುತಪ್ಪನ ಸನ್ನಿದಿಯಲ್ಲಿ ನೆಲ್ಲಕ್ಕಿಯಲ್ಲಿ ಅಕ್ಕಿ ಹಾಕಿ ನೆರೆಕಟ್ಟುವ ಮೂಲಕ ಇದಕ್ಕೆ ಚಾಲನೆ ನೀಡಲಾಯಿತು.

ಹಬ್ಬದ ಸಂಭ್ರಮದಲ್ಲಿರುವ ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಗದ್ದೆಯಿಂದ ತಂದ ಭತ್ತದ ಪೈರನ್ನು ಕಣದಲ್ಲಿರಿಸಿ ಜಾನಪದ ನೃತ್ಯಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಧಾನ್ಯ ಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ವೇಳೆ ಎಲ್ಲರೂ ಸಾಮೂಹಿಕವಾಗಿ ಕೈಯಲ್ಲಿ ಕತ್ತಿ ಹಿಡಿದು ನೃತ್ಯಮಾಡಿದರು. ಹೊಸ ಅರಿ ಎಂದರೆ ಹೊಸ ಭತ್ತವನ್ನು ಮನೆಗೊಯ್ದು ಪೂಜಿಸಿದರು. ಬಳಿಕ ಕದಿರು ತೆಗೆದ ಭತ್ತದಿಂದ ಪಾಯಸ ತಯಾರಿಸಿ ಮನೆ ಮಂದಿ ಮತ್ತು ನೆಂಟರಿಷ್ಟರೆಲ್ಲರೂ ಸೇವಿಸಿ ಸಂಭ್ರಮಿಸಿದರು. ಹುತ್ತರಿಯ ಪ್ರಯುಕ್ತ ತಂಬಿಟ್ಟು, ವಿಶಿಷ್ಟ ಹುತ್ತರಿ ಗೆಣಸು, ಕಡಂಬಿಟ್ಟು ತಯಾರಿಸುತ್ತಾರೆ. ಬೇರೆ ಬೇರೆ ಕಡೆ ನೆಲೆಸಿರುವ ಎಲ್ಲಾ ಕೊಡವರು ಈ ಹಬ್ಬಕ್ಕೆ ಕೊಡಗಿಗೆ ಬಂದು ನೆಂಟರಿಷ್ಟರ ಜತೆ ಕಲೆಯುತ್ತಾರೆ.

ಪ್ರಕೃತಿಯೊಂದಿಗೆ ಹೊಂದಿಕೊಂಡ ಕೊಡಗಿನ ಜನರ ಆಚಾರದ ಸಂಕೇತವಾಗಿ ಐದು ಬಗೆಯ ಹಸಿರು ಮರದ ಎಲೆಗಳಾದ ಉಂಬಳಿ, ಹಲಸು, ಗೇರು, ಮಾವು ಸೇರಿದಂತೆ ಐದು ಬಗೆಯ ಹಸಿರೆಲೆಗಳನ್ನು ಒಟ್ಟುಗೂಡಿಸಿ ನೆರೆಕಟ್ಟಿ ಗುರುಕಾರಣಿಕರಿಗೆ -ದೈವಕ್ಕೆ ನಮಿಸುವುದು ವಾಡಿಕೆ.

ಪ್ರಾಕೃತಿಕ ವಿಕೋಪ ಮತ್ತು ಕೊರೋನಾದಿಂದ ನಲುಗಿದ ಕೊಡಗಿನಲ್ಲಿ ಮೂರು ವರ್ಷಗಳ ಬಳಿಕ ಹುತ್ತರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾಗುಲು ಐನ್ ಮನೆಯಲ್ಲಿ ರವೀಂದ್ರ ನೇತೃತ್ವದಲ್ಲಿ ಹುತ್ತರಿ ಹಬ್ಬದ ಆಚರಣೆ ನಡೆಯಿತು.

andolana

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

38 mins ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

40 mins ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

42 mins ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

44 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

51 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

56 mins ago