ಜಿಲ್ಲೆಗಳು

ಕೊಡಗಿನಾದ್ಯಂತ ಹುತ್ತರಿ ಸಂಭ್ರಮ

ಧಾನ್ಯಲಕ್ಷ್ಮಿಯನ್ನು ಕರೆ ತಂದು ಮನೆ ತುಂಬಿಸಿಕೊಂಡ ಕೊಡಗಿನ ಜನತೆ

ಮಡಿಕೇರಿ: ಕೊಡಗಿನ ಎಲ್ಲೆಡೆ ಈಗ ಹುತ್ತರಿ ಸಂಭ್ರಮ. ವರ್ಷಪೂರ್ತಿ ಅನ್ನನೀಡೋ ಧಾನ್ಯಲಕ್ಷ್ಮಿಯನ್ನು ಪೂಜಿಸಿ ಮನೆಗೊಯ್ದು ಪೊಲಿ ಪೊಲಿ ದೇವಾ, ಪೊಲಿಯೇ ದೇವಾ ಎಂದು ಶ್ರದ್ಧಾಭಕ್ತಿಯಿಂದ ನಮಿಸುವ ಈ ಹಬ್ಬ ಕೊಡವರ ಪ್ರಮುಖ ಹಬ್ಬ.

ಅಧಿಕೃತವಾಗಿ ಕೊಡಗಿನಾದ್ಯಂತ ಪುತ್ತರಿ ಮಂಗಳವಾರ ರಾತ್ರಿಯಿಂದಲೇ ಆರಂಭವಾಗಿದೆ. ಕೊಡವರ ಕುಲದೈವ ಇಗ್ಗುತಪ್ಪನ ಸನ್ನಿದಿಯಲ್ಲಿ ನೆಲ್ಲಕ್ಕಿಯಲ್ಲಿ ಅಕ್ಕಿ ಹಾಕಿ ನೆರೆಕಟ್ಟುವ ಮೂಲಕ ಇದಕ್ಕೆ ಚಾಲನೆ ನೀಡಲಾಯಿತು.

ಹಬ್ಬದ ಸಂಭ್ರಮದಲ್ಲಿರುವ ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಗದ್ದೆಯಿಂದ ತಂದ ಭತ್ತದ ಪೈರನ್ನು ಕಣದಲ್ಲಿರಿಸಿ ಜಾನಪದ ನೃತ್ಯಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಧಾನ್ಯ ಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ವೇಳೆ ಎಲ್ಲರೂ ಸಾಮೂಹಿಕವಾಗಿ ಕೈಯಲ್ಲಿ ಕತ್ತಿ ಹಿಡಿದು ನೃತ್ಯಮಾಡಿದರು. ಹೊಸ ಅರಿ ಎಂದರೆ ಹೊಸ ಭತ್ತವನ್ನು ಮನೆಗೊಯ್ದು ಪೂಜಿಸಿದರು. ಬಳಿಕ ಕದಿರು ತೆಗೆದ ಭತ್ತದಿಂದ ಪಾಯಸ ತಯಾರಿಸಿ ಮನೆ ಮಂದಿ ಮತ್ತು ನೆಂಟರಿಷ್ಟರೆಲ್ಲರೂ ಸೇವಿಸಿ ಸಂಭ್ರಮಿಸಿದರು. ಹುತ್ತರಿಯ ಪ್ರಯುಕ್ತ ತಂಬಿಟ್ಟು, ವಿಶಿಷ್ಟ ಹುತ್ತರಿ ಗೆಣಸು, ಕಡಂಬಿಟ್ಟು ತಯಾರಿಸುತ್ತಾರೆ. ಬೇರೆ ಬೇರೆ ಕಡೆ ನೆಲೆಸಿರುವ ಎಲ್ಲಾ ಕೊಡವರು ಈ ಹಬ್ಬಕ್ಕೆ ಕೊಡಗಿಗೆ ಬಂದು ನೆಂಟರಿಷ್ಟರ ಜತೆ ಕಲೆಯುತ್ತಾರೆ.

ಪ್ರಕೃತಿಯೊಂದಿಗೆ ಹೊಂದಿಕೊಂಡ ಕೊಡಗಿನ ಜನರ ಆಚಾರದ ಸಂಕೇತವಾಗಿ ಐದು ಬಗೆಯ ಹಸಿರು ಮರದ ಎಲೆಗಳಾದ ಉಂಬಳಿ, ಹಲಸು, ಗೇರು, ಮಾವು ಸೇರಿದಂತೆ ಐದು ಬಗೆಯ ಹಸಿರೆಲೆಗಳನ್ನು ಒಟ್ಟುಗೂಡಿಸಿ ನೆರೆಕಟ್ಟಿ ಗುರುಕಾರಣಿಕರಿಗೆ -ದೈವಕ್ಕೆ ನಮಿಸುವುದು ವಾಡಿಕೆ.

ಪ್ರಾಕೃತಿಕ ವಿಕೋಪ ಮತ್ತು ಕೊರೋನಾದಿಂದ ನಲುಗಿದ ಕೊಡಗಿನಲ್ಲಿ ಮೂರು ವರ್ಷಗಳ ಬಳಿಕ ಹುತ್ತರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾಗುಲು ಐನ್ ಮನೆಯಲ್ಲಿ ರವೀಂದ್ರ ನೇತೃತ್ವದಲ್ಲಿ ಹುತ್ತರಿ ಹಬ್ಬದ ಆಚರಣೆ ನಡೆಯಿತು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago