ಜಿಲ್ಲೆಗಳು

ಅಯೋಧ್ಯೆ ಬಾಲರಾಮನ ಮೂರ್ತಿ ಶಿಲೆಗೆ ದಂಡ? ಸ್ಪಷ್ಟನೆ ನೀಡಿದ ಗುತ್ತಿಗೆದಾರ ಶ್ರೀನಿವಾಸ್‌

ಅಯೋಧ್ಯೆಯ ರಾಮಮಂದಿರದ ಬಾಲರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಯಶಸ್ವಿಯಾಗಿದ್ದು, ಈ ಮೂರ್ತಿಯನ್ನು ಕೆತ್ತಿದವರು ಕನ್ನಡಿಗ ಹಾಗೂ ಈ ಶಿಲೆ ದೊರೆತದ್ದು ಕರ್ನಾಟಕದ ನೆಲದಲ್ಲಿ ಎಂಬ ವಿಚಾರ ಕನ್ನಡಿಗರಲ್ಲಿ ಹೆಮ್ಮೆಯನ್ನುಂಟುಮಾಡಿತ್ತು.

ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ತಾಲೂಕಿನ ಹಾರೋಹಳ್ಳಿ ಗುಜೇಗೌಡನಪುರದಲ್ಲಿ ರಾಮದಾಸ್‌ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಶಿಲೆ ದೊರೆತಿತ್ತು. ಇನ್ನು ಕೆಲ ದಿನಗಳಿಂದ ರಾಮಮಂದಿರಕ್ಕೆ ಕಳುಹಿಸಲು ಜಮೀನಿನಲ್ಲಿ ಕಲ್ಲು ಹೊರ ತೆಗೆದಿದ್ದಕ್ಕೆ ರಾಜ್ಯ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ಗುತ್ತಿಗೆದಾರ ಶ್ರೀನಿವಾಸ್‌ ನಟರಾಜ್‌ ಎಂಬುವವರಿಗೆ 80000 ದಂಡವನ್ನು ವಿಧಿಸಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

ಈ ಸುದ್ದಿಗೆ ಇದೀಗ ಗುತ್ತಿಗೆದಾರ ಶ್ರೀನಿವಾಸ್‌ ನಟರಾಜ್‌ ಸ್ಪಷ್ಟನೆ ನೀಡಿದ್ದು, ತಾನು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದಂಡ ಕಟ್ಟಿದ್ದು 2022ರ ಜುಲೈನಲ್ಲಿ ಹಾಗೂ ಬಾಲರಾಮನ ಮೂರ್ತಿಗೆ ಶಿಲೆ ಆಯ್ಕೆಯಾದದ್ದು ಆರು ತಿಂಗಳ ಹಿಂದೆ. ಹೀಗಾಗಿ ತಪ್ಪು ಪ್ರಚಾರ ಮಾಡಬೇಡಿ ಎಂದು ಶ್ರೀನಿವಾಸ್‌ ಹೇಳಿಕೆ ನೀಡಿದ್ದಾರೆ.

ಏನಿದು ಪ್ರಕರಣ?

2022ರಲ್ಲಿ ಜಮೀನಿನ ಮಾಲೀಕ ರಾಮದಾಸ್‌ ನೆಲ ಸಮತಟ್ಟು ಮಾಡಲು ಗುತ್ತಿಗೆದಾರ ಶ್ರೀನಿವಾಸ್‌ ನಟರಾಜ್‌ಗೆ ಗುತ್ತಿಗೆ ನೀಡಿದ್ದರು. ಹೀಗೆ ನೆಲಸಮತಟ್ಟು ಮಾಡುವ ವೇಳೆ ಹತ್ತು ಅಡಿ ಆಳದಲ್ಲಿ ಮೂರ್ತಿ ತಯಾರಿಸಲು ಯೋಗ್ಯವಾದ ಕೃಷ್ಣಶಿಲೆ ಪತ್ತೆಯಾಗಿದ್ದವು. ಸಿಕ್ಕ ಶಿಲೆಯನ್ನು ಮೂರು ಭಾಗವಾಗಿ ಮೇಲೆತ್ತೆಲಾಗಿತ್ತು. ಹೀಗೆ ಶಿಲೆಗಳನ್ನು ಮೇಲೆತ್ತಿ ಇಟ್ಟಿದ್ದನ್ನು ಕಂಡವರು ಗಣಿಗಾರಿಕೆ ನಡೆಯುತ್ತಿದೆ ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಗಮನಕ್ಕೆ ತಂದಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಭಾರೀ ಗಾತ್ರದ ಕಲ್ಲುಗಳನ್ನು ಹೊರತೆಗೆಯಬೇಕಾದರೆ ಅನುಮತಿ ಪಡೆಯಬೇಕು, ಇದು ಅನಧಿಕೃತ ಎಂದು ಗುತ್ತಿಗೆದಾರ ಶ್ರೀನಿವಾಸ್‌ಗೆ ದಂಡ ವಿಧಿಸಿದ್ದರು. ಇದರ ಬಗ್ಗೆ ಅರಿವಿಲ್ಲದೇ ಕಲ್ಲು ಹೊರತೆಗೆದಿದ್ದ ಶ್ರೀನಿವಾಸ್‌ ದಂಡ ಪಾವತಿಸಿದ್ದರು.

 

andolana

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

5 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

6 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

8 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

8 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

8 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

8 hours ago