ಡಿಸೆಂಬರ್ 20ರಂದು ಗುಂಡ್ಲುಪೇಟೆಯ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಣ್ಮರೆಯಾಗಿದ್ದರು. ಅತ್ತ ಮಗು ಪಡೆದ ವೃದ್ಧೆ ಮಹಿಳೆ ಬಾರದ್ದನ್ನು ಕಂಡು ಕಂಡಕ್ಟರ್ ಓರ್ವರಿಗೆ ಮಗುವನ್ನು ನೀಡಿದ್ದರು.
ಬಳಿಕ ಮಹಿಳೆ ಮಗು ಬಿಟ್ಟು ಹೋಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿತ್ತು. ವಿಡಿಯೊ ಮೂಲಕ ಸಂಬಂಧಪಟ್ಟವರು ಬಂದು ಮಗುವನ್ನು ಪಡೆದುಕೊಳ್ಳಬೇಕು ಎಂದೂ ಸಹ ಹೇಳಲಾಗಿತ್ತು. ಪೊಲೀಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ಮಗುವನ್ನು ಸ್ಥಳೀಯ ಸಿಎಂಎಸ್ ಅನಾಥಾಲಯದಲ್ಲಿ ಇರಿಸಲಾಗಿತ್ತು. ನಂತರ ಜಿಲ್ಲಾ ಮಕ್ಕಳ ಸಮಿತಿಯವರು ಮಗುವನ್ನು ಕೊಳ್ಳೇಗಾಲದ ಜೀವನ್ ಜ್ಯೋತಿ ಟ್ರಸ್ಟ್ಗೆ ಹಸ್ತಾಂತರಿಸಿದ್ದರು.
ವೈರಲ್ ಆದ ವಿಡಿಯೊ ಕಂಡ ಬಳಿಕ ಭಾನುವಾರ ಹಾಸನದಿಂದ ಕೊಳ್ಳೇಗಾಲಕ್ಕೆ ಬಂದ ಮಗುವಿನ ತಂದೆ ಮಗುವಿನ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…