ಡಿಸೆಂಬರ್ 20ರಂದು ಗುಂಡ್ಲುಪೇಟೆಯ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಣ್ಮರೆಯಾಗಿದ್ದರು. ಅತ್ತ ಮಗು ಪಡೆದ ವೃದ್ಧೆ ಮಹಿಳೆ ಬಾರದ್ದನ್ನು ಕಂಡು ಕಂಡಕ್ಟರ್ ಓರ್ವರಿಗೆ ಮಗುವನ್ನು ನೀಡಿದ್ದರು.
ಬಳಿಕ ಮಹಿಳೆ ಮಗು ಬಿಟ್ಟು ಹೋಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿತ್ತು. ವಿಡಿಯೊ ಮೂಲಕ ಸಂಬಂಧಪಟ್ಟವರು ಬಂದು ಮಗುವನ್ನು ಪಡೆದುಕೊಳ್ಳಬೇಕು ಎಂದೂ ಸಹ ಹೇಳಲಾಗಿತ್ತು. ಪೊಲೀಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ಮಗುವನ್ನು ಸ್ಥಳೀಯ ಸಿಎಂಎಸ್ ಅನಾಥಾಲಯದಲ್ಲಿ ಇರಿಸಲಾಗಿತ್ತು. ನಂತರ ಜಿಲ್ಲಾ ಮಕ್ಕಳ ಸಮಿತಿಯವರು ಮಗುವನ್ನು ಕೊಳ್ಳೇಗಾಲದ ಜೀವನ್ ಜ್ಯೋತಿ ಟ್ರಸ್ಟ್ಗೆ ಹಸ್ತಾಂತರಿಸಿದ್ದರು.
ವೈರಲ್ ಆದ ವಿಡಿಯೊ ಕಂಡ ಬಳಿಕ ಭಾನುವಾರ ಹಾಸನದಿಂದ ಕೊಳ್ಳೇಗಾಲಕ್ಕೆ ಬಂದ ಮಗುವಿನ ತಂದೆ ಮಗುವಿನ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…