ನಂಜನಗೂಡು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.
ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದರು.
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…