ಜಿಲ್ಲೆಗಳು

ಅದೆಷ್ಟು ಒಡೆದು ಹಾಕ್ತಾರೆ ಒಡೆದು ಹಾಕಲಿ :ಸಿಂಹಗೆ ಸೇಠ್ ಸವಾಲು

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಒಡೆದು ಹಾಕೋದಾದರೆ, ಅದೆಷ್ಟು ಒಡೆದು ಹಾಕುತ್ತಾರೋ ಒಡೆದು ಹಾಕಲಿ ಎಂದು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಸವಾಲು ಹಾಕಿದರು.

ಗುಂಬಜ್ ಮಾದರಿಯ ಬಸ್ ನಿಲ್ದಾಣ ಧ್ವಂಸ ಮಾಡುವೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಯಾರ ಯಾರ ದೃಷ್ಟಿಯಲ್ಲಿ ಏನು ಕಾಣುತ್ತೊ ಅದೇ ಕಾಣುವುದು. ಗೋಪುರಗಳ ಮಸೀದಿ ಮಾದರಿಯಲ್ಲಿ ಇದೇ ಹೇಳುವಂತಹ ಪ್ರತಾಪ್ ಸಿಂಹ ಪ್ರಜ್ಞೆ ಯಾವ ರೀತಿ ಇದೇ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು ಎಂದು ತಿರುಗೇಟು ನೀಡಿದರು. ಇದು ಸರ್ಕಾರದ ಆಸ್ತಿ, ಏನೆಲ್ಲಾ ಒಡೆಯುತ್ತಾರೆ ಕಾದು ನೋಡಬೇಕು?

ಗೋಪುರದ ರೀತಿ ಕಾಣುವುದೆಲ್ಲಾ ಸಾಬ್ರುದು ಅನ್ನೊದಾದರೆ ನಾವು ಏನು ಮಾಡೊದು? ಆ ಶೆಲ್ಟರ್ ಯಾರು ವಿನ್ಯಾಸ ಮಾಡಿದ್ರು? ಎಂಬುದು ನನಗೆ ಗೊತ್ತಿಲ್ಲ. ಅದೆಷ್ಟು ಒಡೆದು ಹಾಕ್ತಾರೆ ಒಡೆದು ಹಾಕಲಿ ಎಂದರು. ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವಿನಾಕಾರಣ ನಾವು ಸಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದರು. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ ಒಂದು ದಿನ ಮಾಡುತ್ತೇವೆ. ಅವರು ಈ ರೀತಿ ಮಾಡುವುದರಿಂದ ವರ್ಷ ಪೂರ್ತಿ ಆಚರಣೆ ಮಾಡುತ್ತಾರೆ ಎಂದು ಅವರು ಹೇಳಿದರು.ಕೃತಿ ವಿರುದ್ಧ ಪಿಐಎಲ್ ಟಿಪ್ಪು ನಿಜ ಕನಸುಗಳು ನಾಟಕ ಕೃತಿ ನನ್ನ ಕೈ ಸೇರಿದೆ. ವಕೀಲ ರಂಗನಾಥ್ ಅವರ ಮೂಲಕ ಮೊಕದ್ದಮೆ ದಾಖಲಿಸುತ್ತೇನೆ. ಪಿಎಎಲ್ ಹಾಕುತ್ತೇವೆ. ಎಲ್ಲಿ? ಯಾವಾಗ ? ಎಂಬುದನ್ನು ವಕೀಲರು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago