ಜಿಲ್ಲೆಗಳು

ಅಮೃತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎರಡು ದಿನ ‘ಇಳೆ-ಮಳೆ’ ನಾಟಕ ಪ್ರದರ್ಶನ

ಮೈಸೂರು : ನೃತ್ಯ ಗಿರಿಯ ಬೆಳ್ಳಿ ಹಬ್ಬ ಅಂಗವಾಗಿ ಮತ್ತು ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ಮೋನೋಡ್ರಾಮ ‘ಇಳೆ – ಮಳೆ’ ಏಕವ್ಯಕ್ತಿಯ ನಾಟಕವನ್ನು  ನಗರದ ಗಾನಭಾರತೀಯಲ್ಲಿ ಪ್ರದರ್ಶಿಸಲಾಗುತ್ತಿದೆ. ನಾಟಕವು ಆಗಸ್ಟ್ 13 ಹಾಗೂ 14ನೇ ತಾರೀಖಿನಂದು ಸಂಜೆ 6:30ಕ್ಕೆ ಮೊದಲ ಪ್ರದರ್ಶನ ಮತ್ತು 7:30ಕ್ಕೆ ಎರಡನೇ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ನಾಟಕ ನೋಡಲು ಬರುವವರಿಗೆ ಪ್ರವೇಶ ದರವು 50 ರೂ ಗಳನ್ನು ನಿಗದಿ ಮಾಡಲಾಗಿದೆ.

ಇಳೆ – ಮಳೆ ನಾಟಕವನ್ನು ಎಂ. ಎಸ್. ವೇಣು ಗೋಪಾಲ್ ರವರು ರಚನೆ ಮಾಡಿದ್ದು, ನಾಟಕದ ನಿರ್ದೇಶನವನ್ನು ನಾ. ಶ್ರೀನಿವಾಸ್, ಹಾಗೂ ಸಂಗೀತ ಪ್ರಭು ರಾವ್ ಹಾಗೂ ಮೃತ್ಯುಂಜಯ ಹಿರೇಮಠ್ ರವರು ನೀಡಿದ್ದಾರೆ.

 

ತಂಡದಲ್ಲಿ

ತಬಲಾ – ರಮೇಶ್ ಧನುರ್,

ರಂಗ ವಿನ್ಯಾಸ – ಡಾ. ಗೀತಾಂಜಲಿ ಆಚಾರ್,

ವಿಶೇಷ ವಾದ್ಯ – ಡಿಡ್ ಗಿರೋ – ಮೇಘಾ

ಇವರುಗಳು ನಿರ್ವಹಣೆ ಮಾಡಲಿದ್ದಾರೆ. ಎಂದು ನೃತ್ಯ ಗಿರಿ ನಿರ್ದೇಶಕರಾದ ಡಾ. ಕೃಪಾ ಫಡ್ಕೆ ರವರು ತಿಳಿಸಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago