ಜಿಲ್ಲೆಗಳು

ಅಕ್ರಮ ಬೀಟೆ ಮರದ ನಾಟ ಸಾಗಾಟ : ಇಬ್ಬರ ಬಂಧನ

ಮಡಿಕೇರಿ: ಅಕ್ರಮವಾಗಿ ಬೀಟೆ ಮರದ ನಾಟ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊನ್ನಂಪೇಟೆ ಅರಣ್ಯ ವಲಯದ ತಂಡ ಯಶಸ್ವಿಯಾಗಿದೆ.
ಕುಂಜಿಲ ಗ್ರಾಮದ ಜುಬೇದ್ (೪೩), ವಿ. ಬಾಡಗ ಗ್ರಾಮದ ವೈ. ಸಿ. ಮಹೇಶ ಬಂಧಿತ ಆರೋಪಿಗಳು. ನೆಮ್ಮಲೆ ಗ್ರಾಮದ ಬ್ರಹ್ಮಗಿರಿ ಅರಣ್ಯ ವ್ಯಾಪ್ತಿಯ ಸಮೀಪ ಶನಿವಾರ ರಾತ್ರಿ ಮರದ ನಾಟ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಂಡ, ಇಬ್ಬರನ್ನು ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಇನ್ನೂ ಕೆಲವರು ಪಾಲ್ಗೊಂಡಿದ್ದು, ಪರಾರಿಯಾಗಿದ್ದಾರೆ.
ಬಂಧಿತರಿಂದ ೩೫ ಮರದ ನಾಟಗಳು, ಅಶೋಕ ಲೈಲ್ಯಾಂಡ್ ಲಾರಿ, ಪಿಕ್ ಅಪ್ ವಾಹನ, ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು ೨೬ ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ಉಪಅರಣ್ಯ ಅಧಿಕಾರಿ ಶಿವರಾಂ ಬಾಬು ಮಾರ್ಗದರ್ಶನದಲ್ಲಿ ತಿತಿಮತಿ ಎಸಿಎಫ್ ಕೆ. ಎ ನೆಹರು ನೇತೃತ್ವದಲ್ಲಿ ಪೊನ್ನಂಪೇಟೆ ಆರ್‌ಎಫ್‌ಒ ಬಿ. ಎಂ. ಶಂಕರ್, ಡಿಆರ್‌ಎಫ್‌ಒ ಸಿ. ಡಿ. ಬೋಪಣ್ಣ, ಕೆ. ಜಿ. ದಿವಾಕರ್, ರಕ್ಷಿತ್, ಮಂಜುನಾಥ ಬೆನಕೊಟಗಿ, ಸಿಬ್ಬಂದಿ ಸಂಜಯ್ ಚಹ್ವಾನ್, ಕೆ. ಜಿ. ರಾಕೇಶ್, ಆಂಟೋನಿ ಪ್ರಕಾಶ್, ಆರ್‌ಆರ್‌ಟಿ ತಂಡ ಕಾಯಾಚರಣೆಯಲ್ಲಿದ್ದರು.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

4 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

4 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

5 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

5 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago