ಮಡಿಕೇರಿ: ಅಕ್ರಮವಾಗಿ ಬೀಟೆ ಮರದ ನಾಟ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊನ್ನಂಪೇಟೆ ಅರಣ್ಯ ವಲಯದ ತಂಡ ಯಶಸ್ವಿಯಾಗಿದೆ.
ಕುಂಜಿಲ ಗ್ರಾಮದ ಜುಬೇದ್ (೪೩), ವಿ. ಬಾಡಗ ಗ್ರಾಮದ ವೈ. ಸಿ. ಮಹೇಶ ಬಂಧಿತ ಆರೋಪಿಗಳು. ನೆಮ್ಮಲೆ ಗ್ರಾಮದ ಬ್ರಹ್ಮಗಿರಿ ಅರಣ್ಯ ವ್ಯಾಪ್ತಿಯ ಸಮೀಪ ಶನಿವಾರ ರಾತ್ರಿ ಮರದ ನಾಟ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಂಡ, ಇಬ್ಬರನ್ನು ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಇನ್ನೂ ಕೆಲವರು ಪಾಲ್ಗೊಂಡಿದ್ದು, ಪರಾರಿಯಾಗಿದ್ದಾರೆ.
ಬಂಧಿತರಿಂದ ೩೫ ಮರದ ನಾಟಗಳು, ಅಶೋಕ ಲೈಲ್ಯಾಂಡ್ ಲಾರಿ, ಪಿಕ್ ಅಪ್ ವಾಹನ, ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು ೨೬ ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ಉಪಅರಣ್ಯ ಅಧಿಕಾರಿ ಶಿವರಾಂ ಬಾಬು ಮಾರ್ಗದರ್ಶನದಲ್ಲಿ ತಿತಿಮತಿ ಎಸಿಎಫ್ ಕೆ. ಎ ನೆಹರು ನೇತೃತ್ವದಲ್ಲಿ ಪೊನ್ನಂಪೇಟೆ ಆರ್ಎಫ್ಒ ಬಿ. ಎಂ. ಶಂಕರ್, ಡಿಆರ್ಎಫ್ಒ ಸಿ. ಡಿ. ಬೋಪಣ್ಣ, ಕೆ. ಜಿ. ದಿವಾಕರ್, ರಕ್ಷಿತ್, ಮಂಜುನಾಥ ಬೆನಕೊಟಗಿ, ಸಿಬ್ಬಂದಿ ಸಂಜಯ್ ಚಹ್ವಾನ್, ಕೆ. ಜಿ. ರಾಕೇಶ್, ಆಂಟೋನಿ ಪ್ರಕಾಶ್, ಆರ್ಆರ್ಟಿ ತಂಡ ಕಾಯಾಚರಣೆಯಲ್ಲಿದ್ದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…