ಮಡಿಕೇರಿ: ಅಕ್ರಮವಾಗಿ ಬೀಟೆ ಮರದ ನಾಟ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊನ್ನಂಪೇಟೆ ಅರಣ್ಯ ವಲಯದ ತಂಡ ಯಶಸ್ವಿಯಾಗಿದೆ.
ಕುಂಜಿಲ ಗ್ರಾಮದ ಜುಬೇದ್ (೪೩), ವಿ. ಬಾಡಗ ಗ್ರಾಮದ ವೈ. ಸಿ. ಮಹೇಶ ಬಂಧಿತ ಆರೋಪಿಗಳು. ನೆಮ್ಮಲೆ ಗ್ರಾಮದ ಬ್ರಹ್ಮಗಿರಿ ಅರಣ್ಯ ವ್ಯಾಪ್ತಿಯ ಸಮೀಪ ಶನಿವಾರ ರಾತ್ರಿ ಮರದ ನಾಟ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಂಡ, ಇಬ್ಬರನ್ನು ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಇನ್ನೂ ಕೆಲವರು ಪಾಲ್ಗೊಂಡಿದ್ದು, ಪರಾರಿಯಾಗಿದ್ದಾರೆ.
ಬಂಧಿತರಿಂದ ೩೫ ಮರದ ನಾಟಗಳು, ಅಶೋಕ ಲೈಲ್ಯಾಂಡ್ ಲಾರಿ, ಪಿಕ್ ಅಪ್ ವಾಹನ, ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು ೨೬ ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ಉಪಅರಣ್ಯ ಅಧಿಕಾರಿ ಶಿವರಾಂ ಬಾಬು ಮಾರ್ಗದರ್ಶನದಲ್ಲಿ ತಿತಿಮತಿ ಎಸಿಎಫ್ ಕೆ. ಎ ನೆಹರು ನೇತೃತ್ವದಲ್ಲಿ ಪೊನ್ನಂಪೇಟೆ ಆರ್ಎಫ್ಒ ಬಿ. ಎಂ. ಶಂಕರ್, ಡಿಆರ್ಎಫ್ಒ ಸಿ. ಡಿ. ಬೋಪಣ್ಣ, ಕೆ. ಜಿ. ದಿವಾಕರ್, ರಕ್ಷಿತ್, ಮಂಜುನಾಥ ಬೆನಕೊಟಗಿ, ಸಿಬ್ಬಂದಿ ಸಂಜಯ್ ಚಹ್ವಾನ್, ಕೆ. ಜಿ. ರಾಕೇಶ್, ಆಂಟೋನಿ ಪ್ರಕಾಶ್, ಆರ್ಆರ್ಟಿ ತಂಡ ಕಾಯಾಚರಣೆಯಲ್ಲಿದ್ದರು.
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…