ಜಿಲ್ಲೆಗಳು

ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆ: 27ನೇ ಸಂಗೀತ ಸಮ್ಮೇಳನ

ಮೈಸೂರು: ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆಯ ೨೭ನೇ ಸಂಗೀತ ಸಮ್ಮೇಳನ ವಿದ್ವಾನ್ ವಿ.ನಂಜುಂಡಸ್ವಾಮಿ ಅಧ್ಯಕ್ಷತೆಯಲ್ಲಿ ಡಿ.೨ರಿಂದ ೬ರವರೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.

ಡಿ.೨ರಂದು ಸಂಜೆ ೫.೩೦ಕ್ಕೆ ಸಂಗೀತ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಬಳಿಕ ಮೈಸೂರು ಎ.ಚಂದನ್ ಕುಮಾರ್ ಕೊಳಲು ವಾದನ ನೀಡಲಿದ್ದಾರೆ. ವಯೋಲಿನ್‌ನಲ್ಲಿ ಮೈಸೂರು ಎಂ.ಸುಮಂತ್, ಮೃದಂಗದಲ್ಲಿ ಕೆ.ಯು.ಜಯಚಂದ್ರರಾವ್, ಘಟ ತುಮಕೂರು ಬಿ.ಶಶಿಶಂಕರ್ ಪಕ್ಕವಾದ್ಯದಲ್ಲಿ ಸಹಕಾರ ನೀಡಲಿದ್ದಾರೆ.

೩ರಂದು ಬೆಳಗ್ಗೆ ೧೦ಕ್ಕೆ ವಿದ್ವಾನ್ ತುಮಕೂರು ಬಿ.ರವಿಶಂಕರ್ ನಿರ್ದೇಶನದಲ್ಲಿ ನಾದ ಲಹರಿ, ವಿದ್ವತ್ ಗೋಷ್ಠಿಯಲ್ಲಿ ಹೊಯ್ಸಳ ಶಿಲ್ಪದಲ್ಲಿ ಸಂಗೀತ ವಾದ್ಯಗಳು ವಿಷಯ ಕುರಿತು ಡಾ.ರಮಾ ವಿ.ಬೆಣ್ಣೂರ್, ಮಹಿಳಾ ಹರಿದಾಸರು- ಒಂದು ಅಧ್ಯಯನ ಪ್ರಾತ್ಯಕ್ಷಿಕೆ ಕುರಿತು ಡಾ.ಸುಕನ್ಯಾ ಪ್ರಭಾಕರ್, ಲಯ ವಿನ್ಯಾಸದಲ್ಲಿ ಗಣಿತ ವೈವಿಧ್ಯ- ಪ್ರಾತ್ಯಕ್ಷಿಕೆ ಕುರಿತು ವಿದ್ವಾನ್ ಎಸ್.ಸುದರ್ಶನ್ ನೀಡಲಿದ್ದಾರೆ.

ಸಂಜೆ ೫.೩೦ಕ್ಕೆ ಕೇಶವ್ ಮೋಹನ್ ಕುಮಾರ್ ಅವರಿಂದ ವಯೋಲಿನ್ ವಾದನ, ವಿಕ್ರಂ ಭಾರದ್ವಾಜ್ ಮೃದಂಗದಲ್ಲಿ ಸಹಕಾರ ನೀಡಲಿದ್ದಾರೆ. ಸಂಜೆ ೬.೩೦ಕ್ಕೆ ಮಲ್ಲಾಡಿ ಸಹೋದರರಿಂದ ದ್ವಂದ್ವ ಗಾಯನ, ವಯೋಲಿನ್‌ನಲ್ಲಿ ಅದಿತಿ ಕೃಷ್ಣಪ್ರಕಾಶ್, ಮೃದಂಗದಲ್ಲಿ ತುಮಕೂರು ಬಿ.ರವಿಶಂಕರ್, ಘಟಂನಲ್ಲಿ ರಘುನಂದನ ರಾವ್ ಸಹಕಾರ ನೀಡಲಿದ್ದಾರೆ.

೪ರಂದು ಬೆಳಗ್ಗೆ ೧೦ ಗಂಟೆಗೆ ವಿದುಷಿ ಸ್ಮಿತಾ ಶ್ರೀಕಿರಣ್ ನಿರ್ದೇಶನದಲ್ಲಿ ವೇಣುವಾದನ ತರಂಗ, ವಿದ್ವತ್ ಗೋಷ್ಠಿಯಲ್ಲಿ ಚಿಕ್ಕದೇವರಾಜ ಒಡೆಯರ್ ವಿರಚಿತ ಗೇಯ ಪ್ರಬಂಧ- ಗೀತಗೋಪಾಲ- ಪ್ರಾತ್ಯಕ್ಷಿಕೆ ಡಾ.ಮೀರಾ ರಾಜಾರಾಂ ಪ್ರಾಣೇಶ್, ಶಾಸ್ತ್ರೀಯ ಸಂಗೀತ ಅಂದು- ಇಂದು- ಮುಂದು ವೈಜ್ಞಾನಿಕ ಚಿಂತನೆ ಪ್ರಾತ್ಯಕ್ಷಿಕೆ- ವಿದ್ವಾನ್ ವಿ.ನಂಜುಂಡಸ್ವಾಮಿ ನೀಡಲಿದ್ದಾರೆ.

ಸಂಜೆ ೫.೩೦ಕ್ಕೆ ಜಿ.ಕೆ.ಮನಮೋಹನ್ ಅವರಿಂದ ಗಾಯನ, ವಯೋಲಿನ್‌ನಲ್ಲಿ ಎಂ.ಸುಮಂತ್, ಮೃದಂಗದಲ್ಲಿ ಅನಿರುದ್ಧ ಭಟ್ ಸಹಕಾರ ನೀಡಲಿದ್ದಾರೆ. ಸಂಜೆ ೬.೩೦ಕ್ಕೆ ಡಾ.ಜಯಂತಿ ಆರ್.ಕುಮರೇಶ್ ಅವರಿಂದ ವೀಣಾವಾದನ, ಮೃದಂಗದಲ್ಲಿ ತುಮಕೂರು ಬಿ.ರವಿಶಂಕರ್, ಘಟಂ ತಿರುಚಿ ಕೃಷ್ಣಸ್ವಾಮಿ ಪಕ್ಕವಾದ್ಯದಲ್ಲಿ ಸಹಕರಿಸುವರು.

೫ರಂದು ಬೆಳಗ್ಗೆ ೧೦ ಗಂಟೆಗೆ ವಿದ್ವಾನ್ ಎ.ಪಿ.ಕೃಷ್ಣಪ್ರಸಾದ್ ಅವರ ಶಿಷ್ಯವೃಂದದಿಂದ ವೇಣುವಾದನ, ವಿದ್ವತ್ ಗೋಷ್ಠಿಯಲ್ಲಿ ತಿಲ್ಲಾನ-ವೈವಿಧ್ಯ ವಿಷಯ ಕುರಿತು ವಿದ್ವಾನ್ ಎನ್.ಆರ್.ಪ್ರಸಾದ್, ಸಮನ್ವಯಕಾರರಾಗಿ ಪ್ರೊ.ಜಿ.ಎಸ್.ರಾಮಾನುಜಂ ಭಾಗವಹಿಸುವರು. ಸಂಜೆ ೫.೩೦ಕ್ಕೆ ರಾವ್ ಆರ್. ಶರತ್ ಗಾಯನಕ್ಕೆ ವಯೋಲಿನ್‌ನಲ್ಲಿ ಕೇಶವ್ ಮೋಹನ್‌ಕುಮಾರ್, ಮೃದಂಗದಲ್ಲಿ ಪ್ರವೀಣ್ ಹರಿಹರನ್ ಸಹಕಾರ ನೀಡುವರು. ಸಂಜೆ ೬.೩೦ಕ್ಕೆ ರಾಮಕೃಷ್ಣ ಮೂರ್ತಿ ಗಾಯನ, ವಯೋಲಿನ್ ಮತ್ತೂರು ಆರ್.ಶ್ರೀನಿಧಿ, ಮೃದಂಗದಲ್ಲಿ ಅರ್ಜುನ್‌ಕುಮಾರ್ ಸಹಕಾರ ನೀಡಲಿದ್ದಾರೆ.

೬ರಂದು ಸಂಜೆ ೫ ಗಂಟೆಗೆ ಪ್ರಜ್ವಲ್ ರಂಗರಾಜನ್ ಮತ್ತು ತಂಡದಿಂದ ವೀಣೆ, ಸಂಜೆ ೬ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಸಮ್ಮೇಳನಾಧ್ಯಕ್ಷರಾದ ವಿ.ನಂಜುಂಡಸ್ವಾಮಿ ಅವರಿಗೆ ಸಂಗಿತ ವಿದ್ಯಾನಿಧಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.. ಸಂಗೀತ ವಿದ್ವಾಂಸ ಎಚ್.ಕೆ.ವೆಂಕಟರಾಮ್ ಸಮಾರೋಪ ಭಾಷಣ ಮಾಡಲಿದ್ದು, ಸಂಗೀತ ವಿದ್ಯಾನಿಧಿ ಮೈಸೂರು ಎಂ.ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ೭ ಗಂಟೆಗೆ ಎಂ,ಬಿ.ಹರಿಹರನ್ ಮತ್ತು ಎಸ್.ಅಶೋಕ್ ಸಹೋದರರಿಂದ ಯುಗಳ ಗಾಯನ, ವಯೋಲಿನ್‌ನಲ್ಲಿ ನಳಿನಿ ಮೋಹನ್, ಮೃದಂಗದಲ್ಲಿ ಪಾರುಪಲ್ಲಿ ಫಲ್ಗುಣ್, ಘಟಂನಲ್ಲಿ ರಂಗನಾಥ್ ಚಕ್ರವರ್ತಿ ಸಹಕಾರ ನೀಡಲಿದ್ದಾರೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

8 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago