ಜಿಲ್ಲೆಗಳು

ಮೈಸೂರಿನಲ್ಲಿ ಜಿಯೋ 5 ಜಿ ಸೇವೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ.

ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ ಪ್ರಾರಂಭದ ಬಗ್ಗೆ ಜಿಯೋ ಘೋಷಣೆ ಮಾಡಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ 5ಜಿ ಸೇವೆ ಆರಂಭವಾಗಿದ್ದು ಸದ್ಯಕ್ಕೆ ರಿಲಯನ್ಸ್ ಜಿಯೋ ಮಾತ್ರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ.

ಇಂದಿನಿಂದ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗಿದೆ.

“” ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ. ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದಾಗಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. 2023ರಿಂದ ಜಿಯೋ ಟ್ರೂ 5ಜಿ ತಂತ್ರಜ್ಞಾನದ ವಿಭಿನ್ನ ಪ್ರಯೋಜನಗಳನ್ನು ಆನಂದಿಸಬಹುದು. ಇದು ನಮ್ಮ ಲಕ್ಷಾಂತರ ಜಿಯೋ ಬಳಕೆದಾರರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಜಿಯೋ ಹೇಳಿದೆ.

“” ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲ, ಜತೆಗೆ ಇ- ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ.
ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆʼʼ ಎಂದು ಕಂಪನಿ ಹೇಳಿಕೊಂಡಿದೆ

andolanait

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

2 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

2 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

3 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

3 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

3 hours ago