ಜಿಲ್ಲೆಗಳು

ಮೈಸೂರಿನಲ್ಲಿ ಜಿಯೋ 5 ಜಿ ಸೇವೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ.

ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ ಪ್ರಾರಂಭದ ಬಗ್ಗೆ ಜಿಯೋ ಘೋಷಣೆ ಮಾಡಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ 5ಜಿ ಸೇವೆ ಆರಂಭವಾಗಿದ್ದು ಸದ್ಯಕ್ಕೆ ರಿಲಯನ್ಸ್ ಜಿಯೋ ಮಾತ್ರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ.

ಇಂದಿನಿಂದ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗಿದೆ.

“” ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ. ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದಾಗಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. 2023ರಿಂದ ಜಿಯೋ ಟ್ರೂ 5ಜಿ ತಂತ್ರಜ್ಞಾನದ ವಿಭಿನ್ನ ಪ್ರಯೋಜನಗಳನ್ನು ಆನಂದಿಸಬಹುದು. ಇದು ನಮ್ಮ ಲಕ್ಷಾಂತರ ಜಿಯೋ ಬಳಕೆದಾರರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಜಿಯೋ ಹೇಳಿದೆ.

“” ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲ, ಜತೆಗೆ ಇ- ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ.
ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆʼʼ ಎಂದು ಕಂಪನಿ ಹೇಳಿಕೊಂಡಿದೆ

andolanait

Recent Posts

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

8 mins ago

ಕರ ಭಾರದ ನಡುವೆ ಘನ ತ್ಯಾಜ್ಯ ವಿಲೇವಾರಿಗೂ ಸೆಸ್‌

ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್‌ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…

34 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 25 ಶನಿವಾರ

56 mins ago

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

11 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

11 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

11 hours ago