ಜಿಲ್ಲೆಗಳು

ಮೈಸೂರಿನಲ್ಲಿ ಜಿಯೋ 5 ಜಿ ಸೇವೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ.

ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ ಪ್ರಾರಂಭದ ಬಗ್ಗೆ ಜಿಯೋ ಘೋಷಣೆ ಮಾಡಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ 5ಜಿ ಸೇವೆ ಆರಂಭವಾಗಿದ್ದು ಸದ್ಯಕ್ಕೆ ರಿಲಯನ್ಸ್ ಜಿಯೋ ಮಾತ್ರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ.

ಇಂದಿನಿಂದ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗಿದೆ.

“” ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ. ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದಾಗಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. 2023ರಿಂದ ಜಿಯೋ ಟ್ರೂ 5ಜಿ ತಂತ್ರಜ್ಞಾನದ ವಿಭಿನ್ನ ಪ್ರಯೋಜನಗಳನ್ನು ಆನಂದಿಸಬಹುದು. ಇದು ನಮ್ಮ ಲಕ್ಷಾಂತರ ಜಿಯೋ ಬಳಕೆದಾರರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಜಿಯೋ ಹೇಳಿದೆ.

“” ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಮಾತ್ರವಲ್ಲ, ಜತೆಗೆ ಇ- ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ.
ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆʼʼ ಎಂದು ಕಂಪನಿ ಹೇಳಿಕೊಂಡಿದೆ

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago