ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ವರ್ಷಕ್ಕೊಮ್ಮೆ ಮಾತ್ರ ಜಾತ್ರೆಗಳ ಸಂದರ್ಭದಲ್ಲಿ ಆಗಮಿಸಿ ಜನರು ಸೇರುವ ಸ್ಥಳದಲ್ಲಿ ದೊಡ್ಡ ಸುದ್ದಿಯಾಗುವ ರೀತಿ ಮಾತನಾಡಿ ಹೋಗುತ್ತಾರೆ. ವರುಣಾ ಕ್ಷೇತ್ರಕ್ಕೆ ಅವರ ಕೊಡುಗೆ ಏನು ಇಲ್ಲ. ಬಿಜೆಪಿ ಪಕ್ಷದಿಂದ ಅವರು ಸ್ಪರ್ಧಿಸಿದರೆ ಸೋಲುವುದು ಖಚಿತ, ಒಂದು ವೇಳೆ ಅವರು ಸ್ಪರ್ಧಿಸಿ ಜಯಗಳಿಸಿದ್ದೇ ಆದಲ್ಲಿ ನಾನು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಟಿ. ನರಸೀಪುರ ಪುರಸಭೆ ಅಧ್ಯಕ್ಷರಾದ ಮದನ್ರಾಜ್ ಸವಾಲು ಹಾಕಿದ್ದಾರೆ.
ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರವಾಗಿ ಮಾಹಿತಿ ನೀಡಿದ್ದಾರೆ. ವಿಜಯೇಂದ್ರ ಅವರು ಬಂದಾಗಲೆಲ್ಲಾ ಜಾತಿಯ ಹೆಸರಲ್ಲಿ ಕ್ಷೇತ್ರದಲ್ಲಿ ವಿಷ ಬೀಜ ಬಿತ್ತಿ ಹೋಗುತ್ತಿದ್ದಾರೆ. ಆದರೆ ಕ್ಷೇತ್ರದ ಜನರು ಇದಕ್ಕೆ ಬಲಿಯಾಗುವುದಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪುರಸಭಾ ಸದಸ್ಯರಾದ ಮಂಜುನಾಥ್, ಕಾಂಗ್ರೆಸ್ ಮುಖಂಡ ಮಲ್ಲೇಶ್, ಶ್ರೀಕಂಠ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…