ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ವರ್ಷಕ್ಕೊಮ್ಮೆ ಮಾತ್ರ ಜಾತ್ರೆಗಳ ಸಂದರ್ಭದಲ್ಲಿ ಆಗಮಿಸಿ ಜನರು ಸೇರುವ ಸ್ಥಳದಲ್ಲಿ ದೊಡ್ಡ ಸುದ್ದಿಯಾಗುವ ರೀತಿ ಮಾತನಾಡಿ ಹೋಗುತ್ತಾರೆ. ವರುಣಾ ಕ್ಷೇತ್ರಕ್ಕೆ ಅವರ ಕೊಡುಗೆ ಏನು ಇಲ್ಲ. ಬಿಜೆಪಿ ಪಕ್ಷದಿಂದ ಅವರು ಸ್ಪರ್ಧಿಸಿದರೆ ಸೋಲುವುದು ಖಚಿತ, ಒಂದು ವೇಳೆ ಅವರು ಸ್ಪರ್ಧಿಸಿ ಜಯಗಳಿಸಿದ್ದೇ ಆದಲ್ಲಿ ನಾನು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಟಿ. ನರಸೀಪುರ ಪುರಸಭೆ ಅಧ್ಯಕ್ಷರಾದ ಮದನ್ರಾಜ್ ಸವಾಲು ಹಾಕಿದ್ದಾರೆ.
ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರವಾಗಿ ಮಾಹಿತಿ ನೀಡಿದ್ದಾರೆ. ವಿಜಯೇಂದ್ರ ಅವರು ಬಂದಾಗಲೆಲ್ಲಾ ಜಾತಿಯ ಹೆಸರಲ್ಲಿ ಕ್ಷೇತ್ರದಲ್ಲಿ ವಿಷ ಬೀಜ ಬಿತ್ತಿ ಹೋಗುತ್ತಿದ್ದಾರೆ. ಆದರೆ ಕ್ಷೇತ್ರದ ಜನರು ಇದಕ್ಕೆ ಬಲಿಯಾಗುವುದಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪುರಸಭಾ ಸದಸ್ಯರಾದ ಮಂಜುನಾಥ್, ಕಾಂಗ್ರೆಸ್ ಮುಖಂಡ ಮಲ್ಲೇಶ್, ಶ್ರೀಕಂಠ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…