ಜಿಲ್ಲೆಗಳು

ಹಾಸನದಲ್ಲಿ ಶೀಘ್ರದಲ್ಲಿಯೇ ಮದ್ಯಪಾನ ಪ್ರಿಯರ ಹೋರಾಟ ಸಂಘ ಉದ್ಘಾಟನೆ!

ಹಾಸನ: ಮದ್ಯಪಾನಿಗಳಿಗು ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಆಗ್ರಹ ಮಾಡಿದ್ದಾರೆ.

ಹಾಸನದಲ್ಲಿ ತಮ್ಮ ಸಂಘ ಉದ್ಘಾಟನೆ ಮಾಡೋ ಬಗ್ಗೆ ಮಾತನಾಡಿದ ಅವರು, ಎಣ್ಣೆ ಕುಡಿಯುವವರನ್ನು ಯಾರೂ ಕೂಡ ಕುಡುಕರು ಎನ್ನಬಾರದು, ಮದ್ಯಪ್ರಿಯರು ಎಂದು ಕರೆಯಬೇಕು ಎಂದು ಒತ್ತಾಯಿಸಿದರು. ಮದ್ಯಪಾನ ಪ್ರಿಯರಿಗೆ ಇನ್ಶೂರೆನ್ಸ್ ಸೌಲಭ್ಯ ಒದಗಿಸಬೇಕು. ಮದ್ಯ ಕುಡಿದು ಸಾವನ್ನಪ್ಪಿದರೆ ಆ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಬೇಕು. ಮದ್ಯಪ್ರಿಯರಿಗೆ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು, ಅಕಸ್ಮಾತ್ ಕುಡಿದು ಹೆಚ್ಚಾಗಿ ಬಾರ್‌ನಲ್ಲಿ ಮಲಗಿದರೆ ಅವರನ್ನು ಹೊರಗೆ ಕಳುಹಿಸಬಾರದು, ನಾಲ್ಕು ಗಂಟೆ ಅಲ್ಲೇ ವಿಶ್ರಾಂತಿ ಪಡೆಯಲು ಅವಕಾಶ ನೀಡಬೇಕು ಎಂದು ತಮ್ಮ ಹಕ್ಕೊತ್ತಾಯ ಮಾಡಿದರು.

ಇದಿಷ್ಟೇ ಅಲ್ಲದೆ ರಾಜ್ಯದಲ್ಲಿ ಮದ್ಯಪಾನ ನಿಗಮ ಮಂಡಳಿ ರಚಿಸಬೇಕು, ಮದ್ಯಪಾನ ಪ್ರಿಯರಿಗೆ ನಿವೇಶನ ನೀಡುವುದು ಸೇರಿದಂತೆ ಹದಿನೆಂಟು ಬೇಡಿಕೆಗಳನ್ನು ಈಡೇರಿಸಬೇಕು. ಶೀಘ್ರದಲ್ಲಿಯೇ ಅಧಿಕೃತವಾಗಿ ಮದ್ಯಪಾನ ಪ್ರಿಯರ ಹೋರಾಟ ಸಂಘದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಸೇರಿದಂತೆ ಏಳೆಂಟು ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಹೇಳಿದ್ದಾರೆ.

andolanait

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

1 hour ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

1 hour ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

1 hour ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

1 hour ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

1 hour ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

2 hours ago