ಜಿಲ್ಲೆಗಳು

ಹಾಸನದಲ್ಲಿ ಶೀಘ್ರದಲ್ಲಿಯೇ ಮದ್ಯಪಾನ ಪ್ರಿಯರ ಹೋರಾಟ ಸಂಘ ಉದ್ಘಾಟನೆ!

ಹಾಸನ: ಮದ್ಯಪಾನಿಗಳಿಗು ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಆಗ್ರಹ ಮಾಡಿದ್ದಾರೆ.

ಹಾಸನದಲ್ಲಿ ತಮ್ಮ ಸಂಘ ಉದ್ಘಾಟನೆ ಮಾಡೋ ಬಗ್ಗೆ ಮಾತನಾಡಿದ ಅವರು, ಎಣ್ಣೆ ಕುಡಿಯುವವರನ್ನು ಯಾರೂ ಕೂಡ ಕುಡುಕರು ಎನ್ನಬಾರದು, ಮದ್ಯಪ್ರಿಯರು ಎಂದು ಕರೆಯಬೇಕು ಎಂದು ಒತ್ತಾಯಿಸಿದರು. ಮದ್ಯಪಾನ ಪ್ರಿಯರಿಗೆ ಇನ್ಶೂರೆನ್ಸ್ ಸೌಲಭ್ಯ ಒದಗಿಸಬೇಕು. ಮದ್ಯ ಕುಡಿದು ಸಾವನ್ನಪ್ಪಿದರೆ ಆ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಬೇಕು. ಮದ್ಯಪ್ರಿಯರಿಗೆ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು, ಅಕಸ್ಮಾತ್ ಕುಡಿದು ಹೆಚ್ಚಾಗಿ ಬಾರ್‌ನಲ್ಲಿ ಮಲಗಿದರೆ ಅವರನ್ನು ಹೊರಗೆ ಕಳುಹಿಸಬಾರದು, ನಾಲ್ಕು ಗಂಟೆ ಅಲ್ಲೇ ವಿಶ್ರಾಂತಿ ಪಡೆಯಲು ಅವಕಾಶ ನೀಡಬೇಕು ಎಂದು ತಮ್ಮ ಹಕ್ಕೊತ್ತಾಯ ಮಾಡಿದರು.

ಇದಿಷ್ಟೇ ಅಲ್ಲದೆ ರಾಜ್ಯದಲ್ಲಿ ಮದ್ಯಪಾನ ನಿಗಮ ಮಂಡಳಿ ರಚಿಸಬೇಕು, ಮದ್ಯಪಾನ ಪ್ರಿಯರಿಗೆ ನಿವೇಶನ ನೀಡುವುದು ಸೇರಿದಂತೆ ಹದಿನೆಂಟು ಬೇಡಿಕೆಗಳನ್ನು ಈಡೇರಿಸಬೇಕು. ಶೀಘ್ರದಲ್ಲಿಯೇ ಅಧಿಕೃತವಾಗಿ ಮದ್ಯಪಾನ ಪ್ರಿಯರ ಹೋರಾಟ ಸಂಘದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಸೇರಿದಂತೆ ಏಳೆಂಟು ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಹೇಳಿದ್ದಾರೆ.

andolanait

Recent Posts

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

4 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

53 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

1 hour ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

1 hour ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago