ಹಾಸನ: ಮದ್ಯಪಾನಿಗಳಿಗು ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಆಗ್ರಹ ಮಾಡಿದ್ದಾರೆ.
ಹಾಸನದಲ್ಲಿ ತಮ್ಮ ಸಂಘ ಉದ್ಘಾಟನೆ ಮಾಡೋ ಬಗ್ಗೆ ಮಾತನಾಡಿದ ಅವರು, ಎಣ್ಣೆ ಕುಡಿಯುವವರನ್ನು ಯಾರೂ ಕೂಡ ಕುಡುಕರು ಎನ್ನಬಾರದು, ಮದ್ಯಪ್ರಿಯರು ಎಂದು ಕರೆಯಬೇಕು ಎಂದು ಒತ್ತಾಯಿಸಿದರು. ಮದ್ಯಪಾನ ಪ್ರಿಯರಿಗೆ ಇನ್ಶೂರೆನ್ಸ್ ಸೌಲಭ್ಯ ಒದಗಿಸಬೇಕು. ಮದ್ಯ ಕುಡಿದು ಸಾವನ್ನಪ್ಪಿದರೆ ಆ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಬೇಕು. ಮದ್ಯಪ್ರಿಯರಿಗೆ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು, ಅಕಸ್ಮಾತ್ ಕುಡಿದು ಹೆಚ್ಚಾಗಿ ಬಾರ್ನಲ್ಲಿ ಮಲಗಿದರೆ ಅವರನ್ನು ಹೊರಗೆ ಕಳುಹಿಸಬಾರದು, ನಾಲ್ಕು ಗಂಟೆ ಅಲ್ಲೇ ವಿಶ್ರಾಂತಿ ಪಡೆಯಲು ಅವಕಾಶ ನೀಡಬೇಕು ಎಂದು ತಮ್ಮ ಹಕ್ಕೊತ್ತಾಯ ಮಾಡಿದರು.
ಇದಿಷ್ಟೇ ಅಲ್ಲದೆ ರಾಜ್ಯದಲ್ಲಿ ಮದ್ಯಪಾನ ನಿಗಮ ಮಂಡಳಿ ರಚಿಸಬೇಕು, ಮದ್ಯಪಾನ ಪ್ರಿಯರಿಗೆ ನಿವೇಶನ ನೀಡುವುದು ಸೇರಿದಂತೆ ಹದಿನೆಂಟು ಬೇಡಿಕೆಗಳನ್ನು ಈಡೇರಿಸಬೇಕು. ಶೀಘ್ರದಲ್ಲಿಯೇ ಅಧಿಕೃತವಾಗಿ ಮದ್ಯಪಾನ ಪ್ರಿಯರ ಹೋರಾಟ ಸಂಘದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಸೇರಿದಂತೆ ಏಳೆಂಟು ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಹೇಳಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…