ಜಿಲ್ಲೆಗಳು

ಮಾರ್ಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರ ಉದ್ಘಾಟನೆ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಮಾರ್ಟಳ್ಳಿ ಗ್ರಾಮದಲ್ಲಿ ತೆರೆಯಲಾಗಿರುವ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರವನ್ನು ರಾಜ್ಯಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯರಾದ ಜನಧ್ವನಿ ಬಿ ವೆಂಕಟೇಶ್ ಅವರು ಉದ್ಘಾಟಿಸಿದರು.

ನಂತರ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಮಾತನಾಡಿ ತಾಲ್ಲೂಕಿನಲ್ಲಿಯೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಖ್ಯಾತಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಹಿಳೆಯರು ಇರುವುದರಿಂದ ಬಿಜೆಪಿ ಒಬಿಸಿ ಮೋರ್ಚಾ ಹಾಗೂ ಕುರುವಿಲ್ ಫೌಂಡೇಶನ್ ಸಹಯೋಗದೊಂದಿಗೆ ಕಲಿಕಾ ಕೇಂದ್ರವನ್ನು ತೆರೆಯಲಾಗಿದ್ದು,ಈ ಕೇಂದ್ರದಲ್ಲಿ ಐವತ್ತು ಮಹಿಳೆಯರ ಒಂದು ತಂಡ 7ದಿನಗಳ ಕಾಲ ತರಬೇತಿ ಪಡೆಯಲಿದೆ. ತರಬೇತಿ ಸಂದರ್ಭದಲ್ಲಿ ಬೇಕಾಗಿರುವ ಕಚ್ಚಾ ಸಾಮಗ್ರಿಗಳನ್ನು ಒದಗಿಸಿಕೊಡಲಾಗುತ್ತಿದೆ. ಆಟಿಕೆಗಳು,ಗೃಹೋಪಯೋಗಿ ವಸ್ತುಗಳು ಬ್ಯಾಗ್ ಗಳು ಸೇರಿದಂತೆ ವಿವಿಧ ಪದಾರ್ಥಗಳು ಸಿದ್ಧಪಡಿಸಿದ ನಂತರ ಅದಕ್ಕೆ ಬೆಲೆ ನಿಗದಿಪಡಿಸಿ ಮಾರಾಟ ಮಾಡಲಾಗುವುದು ಬಂದಂತಹ ಲಾಭದಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮೀನಾ, ಕುರಟ್ಟಿ ಹೊಸೂರು ಗ್ರಾ ಪಂ ಅಧ್ಯಕ್ಷೆ ಲಕ್ಷ್ಮಿ ನಟರಾಜು ಮುಖಂಡರುಗಳಾದ ಸಮನ್ಸ್, ವಡ್ಡರದೊಡ್ಡಿ ಕುಮಾರ್ ಹಾಜರಿದ್ದರು.

andolana

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

13 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

13 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

14 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

14 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

15 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

16 hours ago