ಜಿಲ್ಲೆಗಳು

ಮಾರ್ಚ್‌ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟ ಮುಷ್ಕರ

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿಕೆ

ಚಾಮರಾಜನಗರ: ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 1  ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಬೇಸರ ಮೂಡಿಸಿದೆ ಎಂದರು.
ಮುಷ್ಕರ ಸಂದರ್ಭದಲ್ಲಿ ನೌಕರರೆಲ್ಲರೂ ಮನೆಯಲ್ಲೇ ಇದ್ದುಕೊಂಡು ಡಿಪಿ ಹಾಗೂ ಸ್ಟೇಟಸ್‌ನಲ್ಲಿ ಬಿತ್ತಿಪತ್ರಗಳನ್ನು ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು. 6ನೇ ವೇತನ ಆಯೋಗದ ಮಾದರಿಯಂತೆ  7ನೇ ವೇತನ ಆಯೋಗದಿಂದ  ಶೀಘ್ರ ಮಧ್ಯಂತರ ವರದಿ ಪಡೆದು ವಿಧಾನಸಭಾ ಚುನಾವಣೆ ನೀತಿಸಂಹಿತೆ ಜಾರಿಗೂ ಮೊದಲು ಫಿಟ್‌ಮೆಂಟ್ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪಂಜಾಬ್, ರಾಜಾಸ್ತಾನ, ಹಿವಾಚಲಪ್ರದೇಶಗಳ ಮಾದರಿಯಲ್ಲಿ ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು. ಈ ಮೂಲಕ ನೌಕರರ ಸಂಧ್ಯಾಕಾಲದ ಬದುಕಿಗೆ ಆಸರೆಯಾಗಬೇಕೆಂದು ಮನವಿ ಮಾಡಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ಶಿವಮೂರ್ತಿ, ಯೋಗೇಶ್, ಖಜಾಂಚಿ ಮಹದೇವಯ್ಯ, ಕೃಷ್ಣಮೂರ್ತಿ, ರಾಜ್ಯ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಕುಂಟೋಜಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

1 hour ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

1 hour ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

2 hours ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

3 hours ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

3 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

3 hours ago